ನ್ಯೂಜ್ ಡೆಸ್ಕ್:ಹರಿಯಾಣ ವಿಧಾನಸಭಾ ಚುನಾವಣೆ ನಡೆದು ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ ಹ್ಯಾಟ್ರಿಕ್ ಜಯಭೇರಿ ಬಾರಿಸಿದೆ.
ಚುನಾವಣೋತ್ತರ ಸಮೀಕ್ಷೇಯನ್ನು ನಂಬಿಕೊಂಡಿದ್ದ ಕಾಂಗ್ರೆಸ್ ಏಕಾಏಕಿ ಬೆಚ್ಚಿ ಬಿದ್ದಿದೆ ಇದಕ್ಕೆ ಇಲ್ಲಿ ಅಡಳಿತಾರೂಡ ಬಿಜೆಪಿಯಲ್ಲಿ 200 Days ಮುಖ್ಯಮಂತ್ರಿ ಕಾರಣ ಎನ್ನುವ ಮಾತು ಎಲ್ಲಡೆ ಕೇಳಿ ಬರುತ್ತಿದೆ ಚುನಾವಣೆ ಹೊತ್ತಿನಲ್ಲಿ ಮುಖ್ಯಮಂತ್ರಿ ಪದವಿ ವಹಿಸಿಕೊಂಡ ನಯಾಬ್ ಸಿಂಗ್ ಸೈನಿ ಬಿಜೆಪಿಯನ್ನು ಅಭೂತಪೂರ್ವ ವಿಜಯದತ್ತ ಮುನ್ನಡೆಸಿದ್ದಾರೆ ಕೇವಲ 200 ದಿನಗಳ ಅಂತರದಲ್ಲಿ ಹ್ಯಾಟ್ರಿಕ್ ವಿಜಯಕ್ಕೆ ಕಾರಣರಾಗಿ ಬಿಜೆಪಿ ಹೈಕಮಾಂಡ್ ಖುಷಿ ಪಡುವಂತೆ ಮಾಡಿದ ನಯಾಬ್ ಸಿಂಗ್ ಸೈನಿ ಆರಂಭದಲ್ಲಿ ಡಮ್ಮಿ ಸಿಎಂ ಎಂದು ಅವರನ್ನು ಅಪಹಾಸ್ಯಕ್ಕೆ ಈಡಾಗಿ ಟೀಕೆಗೆ ಒಳಪಟ್ಟಿದ್ದರು. ಬಿಜೆಪಿಯ ಸಂಪೂರ್ಣ ಚುನಾವಣಾ ಪ್ರಚಾರ ಅವರ ಸುತ್ತಲೇ ಗಿರಕಿ ಹೊಡೆಯುತ್ತಿತ್ತು. ಫಲಿತಾಂಶಗಳ ಆರಂಭಿಕ ಜವಾಬ್ದಾರಿಯನ್ನು ವಹಿಸಿಕೊಂಡ ಸೈನಿ, ಬಿಜೆಪಿ ಸರ್ಕಾರದ ವೈಫಲ್ಯಗಳ ನಡುವೆಯೂ ರಾಜಕೀಯ ಲೆಕ್ಕಾಚಾರಗಳನ್ನು ಹುಸಿಗೊಳಿಸಿ ಬಿಜೆಪಿಗೆ ಹ್ಯಾಟ್ರಿಕ್ ಗೆಲುವು ತಂದುಕೊಟ್ಟಿದ್ದಾರೆ.90ಸ್ಥಾನಗಳ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 48 ವಿಧಾನಸಭಾ ಸ್ಥಾನಗಳನ್ನು ಗೆದ್ದು ಐತಿಹಾಸಿಕ ಹ್ಯಾಟ್ರಿಕ್ ಗೆಲವು ಸಾಧಿಸಿದ್ದರೆ ಕಾಂಗ್ರೆಸ್ 37, ಸ್ವತಂತ್ರರು 3 ಮತ್ತು ಐಎನ್ಎಲ್ಡಿ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಯಾರು ನಯಾಬ್ ಸಿಂಗ್ ಸೈನಿ
ನಯಾಬ್ ಸಿಂಗ್ ಸೈನಿ ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದು, 55 ವರ್ಷದ BA ಮತ್ತು LLB ಓದಿರುವ ಅವರು ಕಾನೂನು ಪಧವಿದರರು, ಸಂಘ ಪರಿವಾರದ ಹಿನ್ನಲೆಯ ಅವರನ್ನು ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು ನಂತರದ ಬೆಳವಣಿಗೆಯಲ್ಲಿ ಅವರನ್ನು ಹರಿಯಾಣ ಮುಖ್ಯಮಂತ್ರಿ ಮಾಡಿದ್ದರು ಈಗಲೂ ಕುರುಕ್ಷೇತ್ರ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದಾರೆ ಅನ್ನೋದು ವಿಶೇಷ.ಅವರು ಲಾಡ್ವಾ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸಮೀಪದ ಕಾಂಗ್ರೆಸ್ ಪ್ರತಿಸ್ಪರ್ಧಿ ಮೇವಾ ಸಿಂಗ್ ವಿರುದ್ಧ 16,054 ಮತಗಳ ಅಂತರದಿಂದ ಜಯಗಳಿಸಿದ್ದಾರೆ
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



