ಶ್ರೀನಿವಾಸಪುರ:ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ಸರಮಾಲೆ ನಡೆದಿದೆ ಜನ ಓಡಾಡುವ ರಸ್ತೆಗೂ ಖಾತೆ ಮಾಡಿರುವ ಅಲ್ಲಿನ ಅಧಿಕಾರಿಗಳು ಅಕ್ರಮಗಳ ವ್ಯವಹಾರ ಸಾಬಿತು ಪಡಿಸಿದ್ದಾರೆ ಎಂದು ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆರೋಪಿಸಿದೆ. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಲಯದ ಮುಂದೆ ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಮಾತಾನಾಡಿದ ಜೈ ಭೀಮ್ ಶ್ರೀನಿವಾಸ್ ಮಾತನಾಡಿ ಗ್ರಾಮಪಂಚಾಯಿತಿಯಲ್ಲಿ ದೂಡ್ಡಮಟ್ಟದಲ್ಲಿ ಅಕ್ರಮಗಳು ನಡೆದಿದ್ದು ಸಿ.ಸಿ ರಸ್ತೆಗೂ ಇ ಖಾತಾ ಮಾಡಿದ್ದಾರೆ ಅದನ್ನು ರದ್ದು ಗೊಳಿಸುವಂತೆ ಒತ್ತಾಯಿಸಿದರು. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ವಿಶೇಷ ತಂಡ ರಚಿಸಬೇಕು ಹಾಗೂ ಸಿ.ಸಿ ರಸ್ತೆಗೆ ಮಾಡಿರುವ ಇ ಖಾತಾ ರದ್ದು ಗೊಳಿಸಿ ವೆಂಕಟರಾಮಪ್ಪ ಮನೆಗೆ ಹೋಗಲು ರಸ್ತೆ ಅನುಕೂಲ ಮಾಡಬೇಕು ತಾಲೂಕಿನಾದ್ಯಂತ ಆಗಿರುವ ನರೇಗಾ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರಗಳು ನಡೆದಿದ್ದು ವಿಶೇಷವಾಗಿ ಪರಿಶೀಲನೆ ಮಾಡಬೇಕು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇವೋಗೆ ಮನವಿ ಪತ್ರ ಸಲ್ಲಿಸಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



