ಶ್ರೀನಿವಾಸಪುರ:ಅಪರಿಚಿತ ವಾಹನ ಬಡಿದು ದ್ವಿಚಕ್ರ ವಾಹನದಲ್ಲಿ ಊರಿಗೆ ತೆರಳುತ್ತಿದ್ದ ತಾಯಿ ಮಗ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಪಟ್ಟಣದ ಹೊರ ವಲಯದಲ್ಲಿ ಶ್ರೀನಿವಾಸಪುರ-ಮುಳಬಾಗಿಲು ರಸ್ತೆಯಲ್ಲಿ ಪುರಸಭೆ ಕಟ್ಟಡದ ಬಳಿ ನಡೆದಿರುತ್ತದೆ.
ಮೃತರನ್ನು ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ(48)ಹಾಗು ಅವರ ಮಗ ರಘು(22)ಎಂದು ಗುರುತಿಸಲಾಗಿದೆ.ಪದ್ಮಮ್ಮನಿಗೆ ಮೈಯಲ್ಲಿ ಹುಷಾರಿಲ್ಲ ಎಂದು ಮಗ ರಘು ಜೋತೆ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸಪುರಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಊರಿಗೆ ಹೋಗುತ್ತಿರುವಾಗ ಎದರುಗಡೆಯಿಂದ ಬಂದಂತ ಬೊಲೊರೋ ವಾಹನ ಡಿಕ್ಕಿ ಹೋಡೆದ ಪರಿಣಾಮ ಅಪಘಾತ ಆಗಿದೆ ಎಂದು ಹೇಳಲಾಗುತ್ತಿದೆ ಡಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಹೋರಟು ಹೋಗಿದ್ದು ಅಪರಿಚಿತ ವಾಹನದ ಪತ್ತೆಗಾಗಿ ಪೊಲೀಸರು ಹಾದಿಯಲ್ಲಿರುವಂತ ಸಿಸಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



