ಬೆಂಗಳೂರು:ಕಲರ್ಸ್ ಕನ್ನಡ ವಾಹಿನಿಯಲ್ಲಿ ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ಸಿಸನ್ 11 ಶೊನಲ್ಲಿ ಸ್ವರ್ಗ-ನರಕದ ಪರಿಕಲ್ಪನೆ ಇದೆ ಇಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳನ್ನು ಜೈಲಿನ ರೂಪದಲ್ಲಿರುವ ಬಂಧಿಖಾನೆಯಂತಹ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿರುವಂತೆ ನೂರಾರು ಕ್ಯಾಮರಾಗಳಲ್ಲಿ ಚಿತ್ರಿಸಲಾಗುತ್ತಿದೆ ಇಲ್ಲಿ ನರಕದಲ್ಲಿರುವ ಸ್ಪರ್ಧಿಗಳಿಗೆ ಗಂಜಿಯನ್ನು ಮಾತ್ರ ಆಹಾರವಾಗಿ ನೀಡಲಾಗುತ್ತಿತ್ತು ಇದು ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ,
ಸ್ವರ್ಗದ ಸ್ಪರ್ಧಿಗಳು ಬಾತ್ರೂಮ್ಗೆ ಹೋಗಲು ಅನುಮತಿ ತೆಗೆದುಕೊಳ್ಳಬೇಕಾದ ಬಗ್ಗೆ ಶೋನಲ್ಲಿ ತೊರಿಸಲಾಗಿದ್ದು ಇದು ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸದಂತಾಗುತ್ತದೆ ಇದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ದೈಹಿಕ ಭಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಪಡೆದುಕೊಳ್ಳುವುದು ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ, ಮತ್ತು ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರಾಮನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಿಗ್ ಬಾಸ್ ಶೋ ಚಿತ್ರಕರಣವಾಗುತ್ತಿರುವ ಜಾಗಕ್ಕೆ ತೆರಳಿ ಸಂಘಟಕರಿಗೆ ನೋಟಿಸ್ ನೀಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26