ಬೆಂಗಳೂರು:ಕಲರ್ಸ್ ಕನ್ನಡ ವಾಹಿನಿಯಲ್ಲಿ ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ಸಿಸನ್ 11 ಶೊನಲ್ಲಿ ಸ್ವರ್ಗ-ನರಕದ ಪರಿಕಲ್ಪನೆ ಇದೆ ಇಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳನ್ನು ಜೈಲಿನ ರೂಪದಲ್ಲಿರುವ ಬಂಧಿಖಾನೆಯಂತಹ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿರುವಂತೆ ನೂರಾರು ಕ್ಯಾಮರಾಗಳಲ್ಲಿ ಚಿತ್ರಿಸಲಾಗುತ್ತಿದೆ ಇಲ್ಲಿ ನರಕದಲ್ಲಿರುವ ಸ್ಪರ್ಧಿಗಳಿಗೆ ಗಂಜಿಯನ್ನು ಮಾತ್ರ ಆಹಾರವಾಗಿ ನೀಡಲಾಗುತ್ತಿತ್ತು ಇದು ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ,
ಸ್ವರ್ಗದ ಸ್ಪರ್ಧಿಗಳು ಬಾತ್ರೂಮ್ಗೆ ಹೋಗಲು ಅನುಮತಿ ತೆಗೆದುಕೊಳ್ಳಬೇಕಾದ ಬಗ್ಗೆ ಶೋನಲ್ಲಿ ತೊರಿಸಲಾಗಿದ್ದು ಇದು ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸದಂತಾಗುತ್ತದೆ ಇದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ದೈಹಿಕ ಭಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಪಡೆದುಕೊಳ್ಳುವುದು ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ, ಮತ್ತು ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರಾಮನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಿಗ್ ಬಾಸ್ ಶೋ ಚಿತ್ರಕರಣವಾಗುತ್ತಿರುವ ಜಾಗಕ್ಕೆ ತೆರಳಿ ಸಂಘಟಕರಿಗೆ ನೋಟಿಸ್ ನೀಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



