ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



