ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



