ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



