ರಾಮನಗರ:ಹೋಂ ಸ್ಟೇ ನಲ್ಲಿ ಯುವತಿಯ ಪೋಟೋ ತೆಗೆಯುತ್ತಿದ್ದ ಯುವಕರ ಕೃತ್ಯ ಪ್ರಶ್ನಿಸಿದ ಯುವಕನನ್ನು ದೊಣ್ಣೆಯಿಂದ ದಾರುಣವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ಘಟನೆ ನಡೆದಿದ್ದು ಬಿಕಾಂ ಪದವಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಚಿಕ್ಕೇನಹಳ್ಳಿಯ ಹೋಂ ಸ್ಟೇ-ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿ ಸಂಭ್ರಮಿಸಿದ್ದಾರೆ ನಂತರ ವಿದ್ಯಾರ್ಥಿಗಳು ಹೊರಡುವಾಗ ಹೋಂ ಸ್ಟೇ ನಲ್ಲಿದ್ದ ಚಂದು ಮತ್ತು ನಾಗೇಶ್ ಎಂಬ ಇಬ್ಬರು ವಿದ್ಯಾರ್ಥಿನಿಯ ಫೋಟೋ ತೆಗೆದಿದ್ದಾರೆ ಇದಕ್ಕೆ ಪುನೀತ್ ಎಂಬ ವಿದ್ಯಾರ್ಥಿ ಯುವತಿಯ ಫೋಟೋ ಯಾಕೆ ತೆಗೆದಿದ್ದೀರಾ ಎಂದು ಪ್ರಶ್ನಿಸಿದ್ದಾನೆ ಇದಕ್ಕೆ ಪೋಟೋ ಶೂಟ್ ಮಾಡುತ್ತಿದ್ದ ಚಂದು ಮತ್ತು ನಾಗೇಶ್ ಕೋಪಗೊಂಡು ಇಬ್ಬರು ಸೇರಿ ದೊಣ್ಣೆಯಿಂದ ಪುನೀತ್ ನನ್ನು ಹೊಡೆದಿದ್ದಾರೆ.ದೊಣ್ಣೆ ಏಟಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಗಾಯಗೊಂಡ ಪುನೀತ್ ನನ್ನು ಬೆಂಗಳೂರಿನ ಕೆಂಗೇರಿ ಸಮೀಪದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಚಿಕಿತ್ಸೆ ಫಲಿಸದೇ ಪುನೀತ್ ಮೃತಪಟ್ಟಿದ್ದಾನೆ.ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ರಾಮನಗರ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



