ಚಿಂತಾಮಣಿ:ಚಿಂತಾಮಣಿ-ಹೊಸಕೋಟೆ ಹೆದ್ದಾರಿಯಲ್ಲಿ APSRTC ಬಸ್ಸು ಹಾಗೂ ಸಿಲಿಂಡರ್ ತುಂಬಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಇಂದು ನಡೆದಿದೆ.
ಆಂಧ್ರದ ಕಡಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ಆಂಧ್ರದ ಸಾರಿಗೆ ಸಂಸ್ಥೆ ಬಸ್ಸು ಮತ್ತು ಚಿಂತಾಮಣಿ ಕಡೆಗೆ ಬರುತ್ತಿದ್ದ ಸಿಲಿಂಡರ್ ತುಂಬಿದ್ದ ಲಾರಿ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಡಿಕ್ಕಿಯಾಗಿದೆ ಲಾರಿಯಲ್ಲಿದ್ದ ನೂರಾರು ಅಡುಗೆ ಸಿಲಿಂಡರ್ ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ನಷ್ಟದ ಅನಾಹುತ ಸಂಭವಿಸಿಲ್ಲ.
ಬಸ್ಸಿನಲ್ಲಿದ್ದ ನಿತ್ಯ ಪೂಜಿತ್(19 ವರ್ಷ)ಅರುಣಮ್ಮ(40 ವರ್ಷ)ವೆಂಕಟೇಶ್ (60 ವರ್ಷ) ಇವರು ಗಾಯಗೊಂಡು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಂಭೀರವಾಗಿ ಗಾಯಗೊಂಡ ಗಾಯಾಳುಗಳು ಹೊಸಕೋಟೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು,ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸಪೇಕ್ಟರ್ ಶಿವರಾಜ್,ನಗರ ಠಾಣೆ ಇನ್ಸಪೇಕ್ಟರ್ ವಿಜಿಕುಮಾರ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ತಮ್ಮ ಕಾರು ನಿಲ್ಲಿಸಿ ಘಟನೆ ಬಗ್ಗೆ ಮಾಹಿತಿ ಪಡೆದು ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು ಸಹಕಾರ ನೀಡಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



