ಶ್ರೀನಿವಾಸಪುರ:ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೊಬ್ಬಳ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕು ಕಸಬಾ ಹೋಬಳಿ ಪಾಳ್ಯ ಗ್ರಾಮದಲ್ಲಿ ನಡದಿದೆ.
ಕೊಲೆಯಾದ ಮಹಿಳೆಯನ್ನು ಗ್ರಾಮದ ಶ್ರೀರಾಮರೆಡ್ಡಿ ಎಂಬುವರ ಪತ್ನಿ ರೂಪಾ (38) ಎಂದು ಗುರುತಿಸಲಾಗಿದೆ.ಸೋಮವಾರ ಮಧ್ಯಾಹ್ನ ರೂಪಾ ಹಸು ಮೇಯಿಸಲು ಹೋದವರು ಮುಸ್ಸಂಜೆಯಾದರು ಮನೆಗೆ ವಾಪಸ್ಸು ಬಾರದ ಹಿನ್ನಲೆ ಕುಟುಂಬಸ್ಥರು ಗ್ರಾಮದ ಸುತ್ತಮುತ್ತಲು ಹುಡುಕಾಡಿದಾಗ ಗ್ರಾಮದ ಹೊರವಲಯದ ಚುರುವುನಹಳ್ಳಿಗೆ ಹೋಗುವ ದಾರಿಯಲ್ಲಿನ ಕೆರೆ ಕಾಲುವೆ ಬಳಿ ರೂಪಾ ರಕ್ತದ ಮಡವಿನಲ್ಲಿ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ ಕುಟುಂಬದವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಶ್ರೀನಿವಾಸಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಇತ್ತು ಪರಿಶೀಲನೆ ನಡೆಸಿದ್ದಾರೆ, ಮೊಬೈಲ್ ಕಾಲ್ ತನಿಖೆ ಒಳಪಡಿಸಿದಾಗ ಕೊಲೆ ಆರೋಪಿ ಸುಳಿವು ಸಿಕ್ಕಿದೆ ಗ್ರಾಮದ ಆನಂದಪ್ಪ ಎಂಬುದನ್ನು ಪತ್ತೆ ಹಚ್ಚಿದ್ದಾರೆ ಪೋಲಿಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಮೃತ ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಇದ್ದ ವಿಚಾರ ಬೆಳಕಿಗೆ ಬಂದಿದೆ. ಕೊಲೆಯಾದ ಮಹಿಳೆ ಹಾಗು ಆರೋಪಿ ನಡುವೆ ಇತ್ತಿಚಿಗೆ ಹಣಕಾಸು ವಿಷಯವಾಗಿ ವೈಮನಸ್ಯ ಏರ್ಪಟ್ಟ ಹಿನ್ನಲೆಯಲ್ಲಿ ಮಹಿಳೆಯನ್ನು ಕತ್ತು ಕೊಯ್ದು ಹತ್ಯೆ ಮಾಡರಬಹುದು ಎಂದು ಶಂಕಿಸಲಾಗಿದೆ.ಆರೋಪಿ ಕೊಲೆ ಮಾಡಲು ಬಳಸಿದ್ದ ಎನ್ನಲಾದ ಕುಡುಗೊಲನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್ ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್,ಇನ್ಸಪೇಕ್ಟರ್ ಗೊರವನಕೊಳ್ಳ ಸೇರಿದಂತೆ ಪೋಲಿಸ್ ಸಿಬ್ಬಂದಿ ಭೇಟಿಕೊಟ್ಟಿದ್ದರು. ಇಂದು ಮಂಗಳವಾರ ಬೆಳಿಗ್ಗೆ ಪೋಲಿಸರು ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆ ತಂದು ಮಹಜರು ನಡೆಸಿದ್ದಾರೆ
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27