ನ್ಯೂಜ್ ಡೆಸ್ಕ್:ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಆರೋಗ್ಯವಂತರಾಗಿ ಬದುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಿಎಂ ರೇವಂತ್ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.
ವಿದ್ಯಾರ್ಥಿ ದಸೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ
ತೆಲಂಗಾಣದ ವಿಭಜಿತ ಮಹಬೂಬ್ ನಗರ ಜಿಲ್ಲೆಯಲ್ಲಿ ಸಿಎಂ ರೇವಂತ್ ರೆಡ್ಡಿ ಕಾಲೇಜು ದಿನಗಳಲ್ಲಿಯೇ ನಾಯಕರಾಗಿ ಹೊರಹೊಮ್ಮಿದ್ದರು. ನಂತರದಲ್ಲಿ ರಾಜಕೀಯ ಪ್ರವೇಶಿಸಿದ ಅವರಿಗೆ 2006 ರಲ್ಲಿ ಜಿಲ್ಲಾಪಂಚಾಯಿತಿ ಸ್ಥಾನಕ್ಕೆ ಸ್ಪರ್ದಿಸಲು ಯಾವ ಪಕ್ಷದವರು ಟಿಕೆಟ್ ನೀಡದ ಹಿನ್ನಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ZPTC ಸ್ಪರ್ದಿಸಿ ವಿಜೇತರಾದರು ನಂತರ 2007 ರಲ್ಲಿ MLC ಯಾಗಿ ಸಂಚಲನಾತ್ಮಕವಾಗಿ ಗೆಲವು ಸಾಧಿಸಿದರು ನಂತರ, ಅವರು ಚಂದ್ರಬಾಬು ನಾಯಕತ್ವ ಮೆಚ್ಚಿ ತೆಲಗುದೇಶಂ ಪಕ್ಷಕ್ಕೆ ಸೇರ್ಪಡೆಯಾದರು ಮತ್ತು ತೆಲಂಗಾಣ ಪಕ್ಷದ ಘಟಕದ ಅಧ್ಯಕ್ಷರಾದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ತೆಲಂಗಾಣ ರಾಜ್ಯ ಉದ್ಭವಾದ ನಂತರ ತಮ್ಮ ರಾಜಕೀಯ ಅಸ್ತಿತ್ವ ಉಳಸಿಕೊಳ್ಳಲು ಅವರು ಕಾಂಗ್ರೆಸ್ ಸೇರಿ ಟಿಪಿಸಿಸಿ ಅಧ್ಯಕ್ಷ ಸ್ಥಾನ ಪಡೆದರು. ತಮ್ಮ ನಿರಂತರ ರಾಜಕೀಯ ಪ್ರಯಾಣದಲ್ಲಿ ನೇರವಾಗಿ ಮಾತನಾಡಿದ್ದೆ ಹೆಚ್ಚು ಅವರ ನೇರಭಾಷಣಗಳಿಂದಲೆ ಕೆಸಿಆರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಸಿಎಂ ಆಗಿರುವ ರೇವಂತ್ ರೆಡ್ಡಿ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾ ಮುನ್ನಡೆಯುತ್ತಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14