ನ್ಯೂಜ್ ಡೆಸ್ಕ್: ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಾಯುಭಾರ ಕುಸಿತವಾಗಿ ಏರ್ಪಡುವ ವಾತವರಣದ ಹಿನ್ನಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ನವೆಂಬರ್ 14ರ ವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ ಕೆಲವೊಂದು ಕಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಕರ್ನಾಟಕದ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ.
ಕರ್ನಾಟಕದ ಕೋಲಾರ ಜಿಲ್ಲೆ ಸೇರಿದಂತೆ ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಆಂಧ್ರದ ಅನ್ನಮಯ್ಯ,ಚಿತ್ತೂರು ಮತ್ತು ತಿರುಪತಿ,ಸೀಮಾ,ನೆಲ್ಲೂರು ಹಾಗು ಕಾಕಿನಾಡ ಜಿಲ್ಲೆಗಳಲ್ಲಿ ನಾಳೆಯಿಂದಲೆ ಮಳೆಯಾಗಲಿದೆ ಎಂದು ತಿಳಿಸಿದೆ. ಮಳೆಯ ಹಿನ್ನೆಲೆಯಲ್ಲಿ ಜನರು ಜಾಗೃತರಾಗಿರಲು ಅಲ್ಲಿನ ಸರ್ಕಾರ ಸೂಚಿಸಿದೆ.
ಕರ್ನಾಟಕದಲ್ಲಿ ತಾಪಮಾನ ಕಡಿಮೆಯಾದಂತೆ ಬೆಳಗ್ಗೆ ಮತ್ತು ಸಂಜೆ ಚಳಿ ಹೆಚ್ಚಾಗಿದ್ದು ನವೆಂಬರ್ 21 ರ ನಂತರ ದಟ್ಟವಾದ ಮಂಜಿನಿಂದಾಗಿ ತಾಪಮಾನವು ಇನ್ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



