ನ್ಯೂಜ್ ಡೆಸ್ಕ್:ಪ್ರಿಯತಮೆಯೊಂದಿಗೆ ವಿವಾಹಕ್ಕೆ ಅಡ್ಡಿಪಡಿಸಿದ ಎಂದು ಪ್ರಿಯತಮೆಯ ತಂದೆಯ ಮೇಲೆ ಪಾಗಲ್ ಪ್ರೇಮಿ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇದರಿಂದ ಪ್ರಿಯತಮೆಯ ತಂದೆ ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.ಘಟನೆಯ ವಿವರಕ್ಕೆ ಹೋದರೆ ಹೈದರಾಬಾದ್ ನಗರದ ಅಂಬರ್ ಪೇಟೆಯ ಭಾಗದ ಬಲ್ವಿಂದರ್ ಸಿಂಗ್ (25) ಹಾಗೂ ಸರೂರ್ನಗರ ವ್ಯಾಪ್ತಿಯ ವೆಂಕಟೇಶ್ವರ ಕಾಲೋನಿಯ ಯುವತಿ (23) ಕೆಲ ದಿನಗಳಿಂದ ಪ್ರಿತಿಸುತ್ತಿದ್ದರು.ವಿಷಯ ತಿಳಿದುಕೊಂಡ ಯುವತಿ ತಂದೆ ಇದನ್ನು ವಿರೋಧಿಸಿ ಯುವತಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ ಇದನ್ನು ತಿಳಿದುಕೊಂಡ ಪ್ರೇಮಿ ಬಲ್ವಿಂದರ್ ಸಿಂಗ್ ಬಾಲಕಿಯ ತಂದೆ ರೇವಂತ್ ಆನಂದ್ ಜತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳದಿದೆ ತನ್ನೊಂದಿಗೆ ತಂದಿದ್ದ ಏರ್ ಗನ್ ನಿಂದ ಯುವತಿ ತಂದೆ ರೇವಂತ್ ಆನಂದ್ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡು ರೇವಂತ್ ಆನಂದ್ ಕಣ್ಣಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



