ಶ್ರೀನಿವಾಸಪುರ: ತಾಲೂಕು ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮತ್ತು ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿಕ್ಷಕ ಭೈರೇಗೌಡ ಚುನಾಯಿತರಾಗಿದ್ದಾರೆ.
ತಮ್ಮ ಸಮೀಪದ ಪ್ರತಿಸ್ಪರ್ಧಿಗಿಂತ 13 ಮತಗಳ ಅಂತರದಿಂದ ಚುನಾಯಿತರಾಗಿದ್ದು, ಖಜಾಂಚಿಯಾಗಿ ಕೈಗಾರಿಕಾ ತರಬೇತಿ ಇಲಾಖೆಯಎಂ.ಎಂ.ವೆಂಕಟೇಶ್ ಹಾಗು ರಾಜ್ಯ ಪರಿಷತ್ ಸ್ಥಾನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೆಂಕಟರೆಡ್ಡಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಸರಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಶಿಕ್ಷಕ ಭೈರೇಗೌಡ ಚುನಾಯಿತರಾದ ಬಗ್ಗೆ ಚುನಾವಣಾಧಿಕಾರಿ ತಿಪ್ಪಣ್ಣ ಘೋಷಣೆ ಮಾಡುತ್ತಿದ್ದಂತೆ ಭೈರೇಗೌಡರ ಆಪ್ತರು ಸಹದ್ಯೋಗಿಗಳು ನೌಕರರ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಭೈರೇಗೌಡ ಮಾತನಾಡಿ ನಾನು ಚುನಾವಣೆ ಕಣದಲ್ಲೆ ಉಳಿಯಬಾರದು ಎಂದು ಷಡ್ಯಂತರ ರೂಪಿಸಿದ್ದರು ಅದನೆಲ್ಲ ಬೇಧಿಸಿ ಭರ್ಜರಿ ಜಯಬೇರಿ ಬಾರಿಸಿದೆ ನಂತರ ಈಗ ಅಧ್ಯಕ್ಷ ಸ್ಥಾನವನ್ನು ಸ್ನೇಹಿತರು ಹಿತೈಶಿಗಳು ಸಹದ್ಯೋಗಿ ಮಿತ್ರರ ಸಹಕಾರದಿಂದ ಗೆದ್ದಿರುವುದಾಗಿ ಹೇಳಿದ ಅವರು ಅಧ್ಯಕ್ಷ ಸ್ಥಾನಕ್ಕೆ ಗೌರವ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.ನಂತರ ತಾಲೂಕು ಕಚೇರಿ ಆವರಣದಲ್ಲಿರುವ ಡಾ.ಬಾಬಾಸಾಹೇಬ್ ಅಂಭೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಗುಮ್ಮಿರೆಡ್ಡಿಪುರಗೋವಿಂದರೆಡ್ಡಿ,ಹಾಲಿ ಅಧ್ಯಕ್ಷ ಬೈರಾರೆಡ್ಡಿ,ಹಾಲಿ ನಿರ್ದೇಶಕ ಕಾಳಾಚಾರಿ,ಮುನಿವೆಂಕಟಪ್ಪ,ಶಿವಮೂರ್ತಿ,ವೆಂಕಟರಮಣ,ರಾಮಚಂದ್ರೇಗೌಡ,ಶ್ರೀರಾಮೇಗೌಡ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



