ಶ್ರೀನಿವಾಸಪುರ: ತಾಲೂಕು ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮತ್ತು ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿಕ್ಷಕ ಭೈರೇಗೌಡ ಚುನಾಯಿತರಾಗಿದ್ದಾರೆ.
ತಮ್ಮ ಸಮೀಪದ ಪ್ರತಿಸ್ಪರ್ಧಿಗಿಂತ 13 ಮತಗಳ ಅಂತರದಿಂದ ಚುನಾಯಿತರಾಗಿದ್ದು, ಖಜಾಂಚಿಯಾಗಿ ಕೈಗಾರಿಕಾ ತರಬೇತಿ ಇಲಾಖೆಯಎಂ.ಎಂ.ವೆಂಕಟೇಶ್ ಹಾಗು ರಾಜ್ಯ ಪರಿಷತ್ ಸ್ಥಾನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೆಂಕಟರೆಡ್ಡಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಸರಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಶಿಕ್ಷಕ ಭೈರೇಗೌಡ ಚುನಾಯಿತರಾದ ಬಗ್ಗೆ ಚುನಾವಣಾಧಿಕಾರಿ ತಿಪ್ಪಣ್ಣ ಘೋಷಣೆ ಮಾಡುತ್ತಿದ್ದಂತೆ ಭೈರೇಗೌಡರ ಆಪ್ತರು ಸಹದ್ಯೋಗಿಗಳು ನೌಕರರ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಭೈರೇಗೌಡ ಮಾತನಾಡಿ ನಾನು ಚುನಾವಣೆ ಕಣದಲ್ಲೆ ಉಳಿಯಬಾರದು ಎಂದು ಷಡ್ಯಂತರ ರೂಪಿಸಿದ್ದರು ಅದನೆಲ್ಲ ಬೇಧಿಸಿ ಭರ್ಜರಿ ಜಯಬೇರಿ ಬಾರಿಸಿದೆ ನಂತರ ಈಗ ಅಧ್ಯಕ್ಷ ಸ್ಥಾನವನ್ನು ಸ್ನೇಹಿತರು ಹಿತೈಶಿಗಳು ಸಹದ್ಯೋಗಿ ಮಿತ್ರರ ಸಹಕಾರದಿಂದ ಗೆದ್ದಿರುವುದಾಗಿ ಹೇಳಿದ ಅವರು ಅಧ್ಯಕ್ಷ ಸ್ಥಾನಕ್ಕೆ ಗೌರವ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.ನಂತರ ತಾಲೂಕು ಕಚೇರಿ ಆವರಣದಲ್ಲಿರುವ ಡಾ.ಬಾಬಾಸಾಹೇಬ್ ಅಂಭೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಗುಮ್ಮಿರೆಡ್ಡಿಪುರಗೋವಿಂದರೆಡ್ಡಿ,ಹಾಲಿ ಅಧ್ಯಕ್ಷ ಬೈರಾರೆಡ್ಡಿ,ಹಾಲಿ ನಿರ್ದೇಶಕ ಕಾಳಾಚಾರಿ,ಮುನಿವೆಂಕಟಪ್ಪ,ಶಿವಮೂರ್ತಿ,ವೆಂಕಟರಮಣ,ರಾಮಚಂದ್ರೇಗೌಡ,ಶ್ರೀರಾಮೇಗೌಡ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



