ನ್ಯೂಜ್ ಡೆಸ್ಕ್:ಚಳಿಗಾಲ ಶುರುವಾಗಿದೆ ಮಂಜು ಬಿಳಲು ಆರಂಭವಾಗಿದೆ. ರೈತಾಪಿ ಜನ ಕೃಷಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇಂತಹ ವಾತವರಣದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಬಗ್ಗೆ ಹೇಳಲಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿ ಮಳೆಯ ಸಂಭವ ಇದೆ ಎನ್ನುವ ಮಾತು ತಜ್ನರಿಂದ ಹೇಳಲಾಗಿದೆ..
ಈ ಬಾರಿ ಹೆಚ್ಚೇ ಎನ್ನಬಹುದಾದಷ್ಟು ಮಳೆ ಸುರುದಿದೆ ಬಿಡುವು ಕೊಡದೇ ಸತತ ಮಳೆಯಿಂದ ಬೆಳೆಗಳು ನೆಲೆ ಕಚ್ಚಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ರೈತರು ಸಾಕಷ್ಟು ಕಷ್ಟ-ನಷ್ಟ ಅನುಭವಿಸಿದ್ದಾರೆ. ಇನ್ನೇನು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ ಎನ್ನುವ ಹೊತ್ತಿನಲ್ಲಿ ಮತ್ತೆ ಮಳೆರಾಯ ಅಬ್ಬರಿಸಲು ಸಜ್ಜಾಗಿದ್ದಾನೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆಯಂತೆ.
ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯ ಶುರುವಾಗಿದೆ.ಇತ್ತ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಉಂಟಾಗಿ ಕರ್ನಾಟಕ ಕೇರಳ ತಮಿಳುನಾಡು ಹಾಗೂ ಶ್ರೀಲಂಕಾ ಕರಾವಳಿ ಮಾರ್ಗವಾಗಿ ಸಂಚಾರ ಮಾಡಲಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇಂದು ಹಾಗೂ ನವೆಂಬರ್ 27ರಂದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎನ್ನುವ ಸೂಚನೆ ನೀಡಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ, ಏಳು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14