ಕೋಲಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ಅಥಾವ ವಿಸ್ತರಣೆಯಾದರೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದು ಅದರಲ್ಲಿ ನನಗೆ ಮಂತ್ರಿ ಸ್ಥಾನ ನೀಡಬೇಕು. ಅದಕ್ಕೆ ನಾನು ಅರ್ಹನಿದ್ದೇನೆ ಎಂದು ಮಾಲೂರು ಶಾಸಕ ಕೆ ವೈ ನಂಜೇಗೌಡ ಮಾಧ್ಯಮದವರ ಬಳಿ ಹೇಳಿಕೊಂಡಿದ್ದಾರೆ.
ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿದ್ದೇನೆ. ತುಂಬಾ ಕಷ್ಟದಲ್ಲಿ ಎರಡನೇ ಬಾರಿಗೆ ಆಯ್ಕೆಯಾಗಿದ್ದೇನೆ. ಕೋಲಾರ ಜಿಲ್ಲೆಯ ಶಾಸಕರು ಮಂತ್ರಿ ಸ್ಥಾನ ಕೇಳಿದ್ದೇವೆ. ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಕೊಟ್ಟರು ನನಗೆ ಒಪ್ಪಿಗೆ ಇದೆ. ಮಂತ್ರಿ ಸ್ಥಾನ ನೀಡುವ ಕುರಿತ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಡುತ್ತೆವೆ ಎಂದು ಶಾಸಕ ಕೆ ವೈ ನಂಜೇಗೌಡ ತಿಳಿಸಿದರು.
ಸಂಪುಟ ಪುನರ್ ರಚನೆ ಅಥಾವ ವಿಸ್ತರಣೆ ಇಲ್ಲ
ಸದ್ಯ ರಾಜ್ಯದಲ್ಲಿ ಯಾವುದೇ ಸಚಿವ ಸಂಪುಟ ಪುನರ್ ರಚನೆ ಹಾಗೂ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ನಾನು ಕೂಡ ಸಚಿವ ಸ್ಥಾನಕ್ಕೆ ಅರ್ಹನಿದ್ದೇನೆ ಎಂದು ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



