ಬೆಂಗಳೂರು:ಪತ್ನಿಯ ಕಾಟಕ್ಕೆ ಬೆಸೆತ್ತು ಪೋಲಿಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಪೋಲಿಸ್ ಹೆಡ್ ಕಾನ್ಸ್ಟೇಬಲ್ ನನ್ನು ತಿಪ್ಪಣ್ಣ ಗುರುತಿಸಲಾಗಿದ್ದು ಇವರು ಬೆಂಗಳೂರು ನಗರದ ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಜೀವ ಬೆದರಿಕೆ ಇತ್ತು ಡೆತ್ ನೋಟ್ ನಲ್ಲಿ ಪ್ರಸ್ತಾಪ!
ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದು ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು ಮನೆ ಮಾಡಿತ್ತು ಪತ್ನಿ ಮತ್ತು ಆಕೆಯ ತಂದೆ ಯಮುನಪ್ಪ ಇಬ್ಬರು ಸೇರಿ ಮಾನಸಿಕವಾಗಿ ಹಿಂಸೆ ನೀಡುತ್ತ ಹಿಯ್ಯಾಳಿಸಿ ಅಶ್ಲೀಲವಾಗಿ ಬೈದು ಕಿರುಕುಳ ಕೊಡುತ್ತಿದ್ದರು ಜೊತೆಗೆ ಮಾವ ಯಮನಪ್ಪನಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ ಪ್ರಸ್ತಾಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪತ್ನಿ ಟಾರ್ಚರಗೆ ಸಾಫ್ಟವೇರ್ ಉದ್ಯೋಗಿ ಅತ್ಮಹತ್ಯೆ
ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸಾಫ್ಟವೇರ್ ಉದ್ಯೋಗಿ ಅತುಲ್ ಸುಭಾಷ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



