ಮುಳಬಾಗಿಲು: ಬೊಲೆರೊ ಟೆಂಪೊ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಗಳಲ್ಲಿ ಹೋಗುತ್ತಿದ್ದ ಐವರು ಸ್ಥಳದಲ್ಲಿಯೆ ಸಾವನಪ್ಪಿರುವ ದಾರುಣ ಘಟನೆ ಮುಳಬಾಗಿಲು ತಾಲ್ಲೂಕು ಎನ್.ವಡ್ಡಹಳ್ಳಿಯಿಂದ ಗುಡಿಪಲ್ಲಿ ಮಾರ್ಗದಲ್ಲಿ ಬುಧವಾರ ಸಂಜೆ ನಡೆದಿದೆ ಮೃತಪಟ್ಟವರೆಲ್ಲ ಕೃಷಿ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಮೃತ ಪಟ್ಟವರನ್ನು ಕೋನಂಗುಂಟೆ ಗ್ರಾಮದ ರಾಧಪ್ಪ 82,ಚಿಕ್ಕವೆಂಕಟರವಣಪ್ಪ 52,ಇತನ ಪತ್ನಿ ಅಲುವೇಲಮ್ಮ35, ನಾಗನಹಳ್ಳಿ ಗ್ರಾಮದ ಸಿ.ವೆಂಕಟರಾಮಪ್ಪ 45 ಇತನ ಪತ್ನಿ ಗಾಯಿತ್ರಮ್ಮ 40 ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿರುತ್ತಾರೆ.
ಇವರೆಲ್ಲಾ ದಿನಗೂಲಿ ಕೃಷಿ ಕಾರ್ಮಿಕರಾಗಿದ್ದು ಎನ್.ವಡ್ದಹಳ್ಳಿ ಟಮ್ಯಾಟೊ ಮಂಡಿಯಲ್ಲಿ ಕೆಲಸ ಮುಗಿಸಿಕೊಂಡು ತಮ್ಮ ಗ್ರಾಮಗಳಿಗೆ ಐದು ಮಂದಿ ಮೂವರು ದ್ವಿಚಕ್ರ ವಾಹನಗಳಲ್ಲಿ ಎನ್.ವಡ್ಡಹಳ್ಳಿ-ಗುಡಿಪಲ್ಲಿ ಮಾರ್ಗದಲ್ಲಿ ಆಂಬ್ಲಿಕಲ್ ಮುಖ್ಯ ರಸ್ತೆ ಬಳಿ ಹೋಗುತ್ತಿದ್ದಾಗ ಎದರುಗಡೆ ಅಜಾಗುರುಕತೆ ಹಾಗು ಅತಿಯಾದ ವೇಗವಾಗಿ ಬಂದಂತ ಬೊಲೊರೊ ಪಿಕ್ ಅಪ್ ವಾಹನ ಡಿಕ್ಕಿ ಹೊಡೆದಿದೆ ಡಿಕ್ಕಿಯಾಗುತ್ತಿದ್ದಂತೆ ದ್ವಿಚಕ್ರ ವಾಹನಗಳಲ್ಲಿದ್ದ ನಾಲ್ಕು ಮಂದಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ತೀವ್ರವಾಗಿ ಗಾಯಗೊಂಡಿದ್ದ ಗಾಯಿತ್ರಮ್ಮ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುತ್ತಾರೆ.ಬೊಲೊರೊ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಸ್ಥಳಕ್ಕೆ ಬಂದ ಜಿಲ್ಲಾ ಎಸ್ಪಿ
ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



