ಶ್ರೀನಿವಾಸಪುರ:ಅಖಿಲ ಭಾರತ ನಾಗರಿಕರ ಸೇವಾ ಕಬ್ಬಡಿ ಪಂದ್ಯಾವಳಿಗಳು ಜನವರಿ 3 ರಿಂದ ದೆಹಲಿಯಲ್ಲಿ ನಡೆಯಲಿದ್ದು ಇದರಲ್ಲಿ 14 ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದು ಇವರಲ್ಲಿ ಶ್ರೀನಿವಾಸಪುರ ತಾಲೂಕು ಗೌವನಪಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಮಾಧವಿ ರಾಜ್ಯ ತಂಡದ ಆಟಗಾರ್ತಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ರಾಜ್ಯ ಮಟ್ಟದ ಕಬಡಿ ಪಂದ್ಯಾವಳಿಯನ್ನು ಕಳೆದ ಆಗಸ್ಟ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು ಈ ಸಂದರ್ಭದಲ್ಲಿ ಶಿಕ್ಷಕಿ ಮಾಧವಿ ಜಿಲ್ಲಾ ಪ್ರತಿನಿಧಿಯಾಗಿ ಭಾಗವಸಿ ಉತ್ತಮ ಪ್ರದರ್ಶನ ನೀಡಿದ್ದ ಹಿನ್ನಲೆಯಲ್ಲಿ ಅವರನ್ನು ಅಖಿಲ ಭಾರತ ನಾಗರಿಕರ ಸೇವಾ ರಾಷ್ಟ್ರೀಯ ಕಬಡಿ ಪಂದ್ಯಾವಳಿಯಲ್ಲೂ ಆಡಲು ಅವಕಾಶ ಕಲ್ಪಿಸಿದ್ದಾರೆ,ಜನವರಿ 3ರಿಂದ 8ನೇ ದಿನಾಂಕದ ವರಿಗೂ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಕಬಡಿ ಪಂದ್ಯಾವಳಿಗಳು ನಡೆಲಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



