ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣದ ಕುರಿತಂತೆ ಅಧ್ಯಯನ ನಡೆಸಲು ಆಂಧ್ರ ಸರ್ಕಾರದ ಮಂತ್ರಿಗಳು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು,ಇದಕ್ಕಾಗಿ ರಚಿಸಿರುವ ಆಂಧ್ರ ಸರ್ಕಾರದ ಉಪ ಸಮಿತಿಯ ಸಚಿವರಾದ ಸಾರಿಗೆ ಮಂತ್ರಿ ಮಂಡಿಪಲ್ಲಿರಾಮಪ್ರಸಾದ್ ರೆಡ್ಡಿ, ಗೃಹಮಂತ್ರಿ ವಂಗಲಪುಡಿ ಅನಿತಾ ಮತ್ತು ಗುಮ್ಮಡಿ ಸಂಧ್ಯಾರಾಣಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಸ್ ಪ್ರಯಾಣ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರ ಅಭಿಪ್ರಾಯಗಳನ್ನು ಶೇಖರಿಸಿದ ಅವರು ಮಹಿಳಾ ಪ್ರಯಾಣಿಕರು ಪಡೆದ ಉಚಿತ ಟಿಕೆಟ್ ಪಡೆದು ಪರಶೀಲನೆ ಮಾಡಿದ್ದಾರೆ ಬಳಿಕ ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಉಚಿತ ಬಸ್ ಪ್ರಯಾಣದ ಕಾರ್ಯಚಟುವಟಿಕೆ ಕುರಿತಾಗಿ ಮಾಹಿತಿ ಪಡೆದಿರುತ್ತಾರೆ.
200 ಕೋಟಿ ನಷ್ಟದ ಅಂದಾಜು
ಆಂಧ್ರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ತಿಂಗಳಿಗೆ ರೂ.300 ಕೋಟಿ ಸಂಬಳಕ್ಕೆ ಖರ್ಚು ಮಾಡುತ್ತಿದ್ದು ಒಂದು ವೇಳೆ ಕರ್ನಾಟಕದಂತೆ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೆ ಆದರೆ ತಿಂಗಳಿಗೆ ರೂ.200 ಕೋಟಿ ಆದಾಯ ಕಳೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



