ಬೆಂಗಳೂರು: ಕರ್ನಾಟಕದ ನಾಲ್ಕು ಸಾರಿಗೆ ಸಂಸ್ಥೆಗಳಿಗೂ ಅನ್ವಯಿಸುವಂತೆ ಪ್ರಯಾಣದರವನ್ನು ಇಂದು (ಶನಿವಾರ) ಮಧ್ಯ ರಾತ್ರಿಯಿಂದಲೇ ಜಾರಿಗೆ ಬರುವಂತೆ ಏರಿಕೆ ಮಾಡಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ಅದರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪಯಾಣದ ದರ ಪರಿಷ್ಕರಣೆ ಮಾಡಲಾಗಿರುವುದಾಗಿ ಹೇಳಲಾಗಿರುತ್ತದೆ.
ಪ್ರತಿದಿನ ಸರಾಸರಿ 116.18ಲಕ್ಷ ಪುಯಾಣಿಕರು ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ ಹಾಗು ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಅನುಷ್ಠಾನದ ನಂತರ ರಾಜ್ಯದಲ್ಲಿ ಸುಮಾರು ಅರವತ್ನಾಲ್ಕು ಲಕ್ಷ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸುತ್ತಿರುವುದಾಗಿ ಎಂದು ಅಂದಾಜಿಸಲಾಗಿದೆ.
ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳು ಪ್ರಸ್ತುತ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಸಾರಿಗೆ ಸಂಸ್ಥೆಗಳಿಗೆ ಡೀಸೆಲ್ ಮತ್ತು ಸಿಬ್ಬಂದಿಗಳಿಗೆ ವೇತನ ಪಾವತಿಸುವುದು ಪ್ರಮುಖ ವೆಚ್ಚಗಳಾಗಿದ್ದು, ಸದರಿ ಎರಡು ವೆಚ್ಚಗಳು ಸೇರಿದಂತೆ ಒಟ್ಟು ಶೇಕಡ 90ರಷ್ಟು ವೆಚ್ಚ ಹೆಚ್ಚಳವಾಗಿರುತ್ತದೆ. ಸದರಿ ಎರಡು ಅಂಶಗಳಲ್ಲಿ ಯಾವುದೇ ಬದಲಾವಣೆಯಾದಲ್ಲಿ ನಗದು ಕೊರತೆಗೆ ಕಾರಣವಾಗುತ್ತದೆ ಎನ್ನಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



