ಶ್ರೀನಿವಾಸಪುರ:ಮನೆಯ ಬೀಗ ಹೊಡೆದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಹಾಡು ಹಗಲೆ ನಡೆದಿರುತ್ತದೆ,ಕುಟುಂಬದವರು ಕೃಷಿಕಾರ್ಮಿಕರಾಗಿದ್ದು ಕೂಲಿಗಾಗಿ ಹೋಗಿದ್ದ ವೇಳೆ ಕಳ್ಳತನ ನಡೆದು ಮನೆಯಲ್ಲಿದ್ದ ಸುಮಾರು 25 ಗ್ರಾಂ ಮಾಂಗಲ್ಯ ಸರ,ನಗದನ್ನು ಕಳ್ಳರು ಕದ್ದೊಯಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಾರೆ.
ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮದ ಹಾಲಿನ ಸೊಸೈಟಿ ಪಕ್ಕದಲ್ಲಿರುವ ದ್ಯಾವಮ್ಮ ಎನ್ನುವರಿಗೆ ಸೇರಿದ ಮನೆಯಲ್ಲಿ ಹಗಲು ಸುಮಾರು ಮೂರುಗಂಟೆ ಸಮಯದಲ್ಲಿ ಮನೆಗೆ ಹಾಕಿದ್ದ ಬೀಗ ಹೊಡೆದು ಕಳ್ಳತನ ಮಾಡಿರುವುದಾಗಿ ಎಂದು ಮನೆಯವರು ಶ್ರೀನಿವಾಸಪುರ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಸ್ಥಳಕ್ಕೆ ಪೋಲಿಸ್ ಇನ್ಸಪೇಕ್ಟರ್ ಗೊರವನಕೊಳ್ಳ ಹಾಗೂ ಸಬ್ ಇನ್ಸಪೇಕ್ಟರ್ ಜಯರಾಮ್ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯಲ್ಲಿ ಹಾಡು ಹಗಲೆ ಕಳ್ಳರ ಕೈಚಳಕಕ್ಕೆ ಕಲ್ಲೂರು ಗ್ರಾಸಮಸ್ಥರು ಏಕಾಏಕಿ ಬೆಚ್ಚಿಬಿದ್ದಾರೆ
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



