ಶ್ರೀನಿವಾಸಪುರ:ಮನೆಯ ಬೀಗ ಹೊಡೆದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಹಾಡು ಹಗಲೆ ನಡೆದಿರುತ್ತದೆ,ಕುಟುಂಬದವರು ಕೃಷಿಕಾರ್ಮಿಕರಾಗಿದ್ದು ಕೂಲಿಗಾಗಿ ಹೋಗಿದ್ದ ವೇಳೆ ಕಳ್ಳತನ ನಡೆದು ಮನೆಯಲ್ಲಿದ್ದ ಸುಮಾರು 25 ಗ್ರಾಂ ಮಾಂಗಲ್ಯ ಸರ,ನಗದನ್ನು ಕಳ್ಳರು ಕದ್ದೊಯಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಾರೆ.
ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮದ ಹಾಲಿನ ಸೊಸೈಟಿ ಪಕ್ಕದಲ್ಲಿರುವ ದ್ಯಾವಮ್ಮ ಎನ್ನುವರಿಗೆ ಸೇರಿದ ಮನೆಯಲ್ಲಿ ಹಗಲು ಸುಮಾರು ಮೂರುಗಂಟೆ ಸಮಯದಲ್ಲಿ ಮನೆಗೆ ಹಾಕಿದ್ದ ಬೀಗ ಹೊಡೆದು ಕಳ್ಳತನ ಮಾಡಿರುವುದಾಗಿ ಎಂದು ಮನೆಯವರು ಶ್ರೀನಿವಾಸಪುರ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಸ್ಥಳಕ್ಕೆ ಪೋಲಿಸ್ ಇನ್ಸಪೇಕ್ಟರ್ ಗೊರವನಕೊಳ್ಳ ಹಾಗೂ ಸಬ್ ಇನ್ಸಪೇಕ್ಟರ್ ಜಯರಾಮ್ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯಲ್ಲಿ ಹಾಡು ಹಗಲೆ ಕಳ್ಳರ ಕೈಚಳಕಕ್ಕೆ ಕಲ್ಲೂರು ಗ್ರಾಸಮಸ್ಥರು ಏಕಾಏಕಿ ಬೆಚ್ಚಿಬಿದ್ದಾರೆ
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



