ಶ್ರೀನಿವಾಸಪುರ:ಮನೆಯ ಬೀಗ ಹೊಡೆದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಹಾಡು ಹಗಲೆ ನಡೆದಿರುತ್ತದೆ,ಕುಟುಂಬದವರು ಕೃಷಿಕಾರ್ಮಿಕರಾಗಿದ್ದು ಕೂಲಿಗಾಗಿ ಹೋಗಿದ್ದ ವೇಳೆ ಕಳ್ಳತನ ನಡೆದು ಮನೆಯಲ್ಲಿದ್ದ ಸುಮಾರು 25 ಗ್ರಾಂ ಮಾಂಗಲ್ಯ ಸರ,ನಗದನ್ನು ಕಳ್ಳರು ಕದ್ದೊಯಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಾರೆ.
ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮದ ಹಾಲಿನ ಸೊಸೈಟಿ ಪಕ್ಕದಲ್ಲಿರುವ ದ್ಯಾವಮ್ಮ ಎನ್ನುವರಿಗೆ ಸೇರಿದ ಮನೆಯಲ್ಲಿ ಹಗಲು ಸುಮಾರು ಮೂರುಗಂಟೆ ಸಮಯದಲ್ಲಿ ಮನೆಗೆ ಹಾಕಿದ್ದ ಬೀಗ ಹೊಡೆದು ಕಳ್ಳತನ ಮಾಡಿರುವುದಾಗಿ ಎಂದು ಮನೆಯವರು ಶ್ರೀನಿವಾಸಪುರ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಸ್ಥಳಕ್ಕೆ ಪೋಲಿಸ್ ಇನ್ಸಪೇಕ್ಟರ್ ಗೊರವನಕೊಳ್ಳ ಹಾಗೂ ಸಬ್ ಇನ್ಸಪೇಕ್ಟರ್ ಜಯರಾಮ್ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯಲ್ಲಿ ಹಾಡು ಹಗಲೆ ಕಳ್ಳರ ಕೈಚಳಕಕ್ಕೆ ಕಲ್ಲೂರು ಗ್ರಾಸಮಸ್ಥರು ಏಕಾಏಕಿ ಬೆಚ್ಚಿಬಿದ್ದಾರೆ
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



