ನ್ಯೂಜ್ ಡೆಸ್ಕ್:ಅಯೋಧ್ಯೆ ರಾಮ ಮಂದಿರಕ್ಕೆ ರಹಸ್ಯ ಕ್ಯಾಮರಾದೊಂದಿಗೆ ಪ್ರವೇಶಿಸಿದ್ದ ವ್ಯಕ್ತಿಯನ್ನು ದೇವಾಲಯದ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ದೇವಾಲಯದ ಸಿಬ್ಬಂದಿ ಹಿಡಿದ ವ್ಯಕ್ತಿ ತನ್ನ ಕನ್ನಡಕದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿಕೊಂಡು ದೇಗುಲದ ಒಳಗಡೆ ಫೋಟೋ ತಗೆಯಲು ಮುಂದಾಗಿದ್ದಾನೆ. ದೇಗುಲದ ಪ್ರಮುಖ ಗೇಟ್ಗೆ ಆಗಮಿಸುವ ಮುನ್ನ ನಡೆದ ಎಲ್ಲಾ ಭದ್ರತಾ ತಪಾಸಣೆಗಳಲ್ಲೂ ಕಣ್ತಪ್ಪಿಸಿ ಮುಂದೆ ಸಾಗಿದ್ದಾನೆ. ಪ್ರಮುಖ ಗೇಟ್ ಮುಂದೆ ಬರುತ್ತಿದ್ದಂತೆ ಈತನ ಕನ್ನಡಕದಿಂದ ಫ್ಲಾಶ್ ಲೈಟ್ ಆನ್ ಆಗಿದ್ದು, ಸೆಕ್ಯೂರಿಟಿ ಗಾರ್ಡ್ಗೆ ಕೈಗೆ ಸಿಕ್ಕಿಬಿದ್ದಿದ್ದಾನೆ.ವಡೋದರದಲ್ಲಿ ಉದ್ಯೋಮಿಯಾಗಿರುವ ಈತನ ಹೆಸರು ಜಾನಿ ಜೈಶಂಕರ್. ಪತ್ನಿಸಮೇತ ರಾಮಲಲ್ಲಾನ ದರ್ಶನಕ್ಕೆ ಆಗಮಿಸಿದ್ದು ಕನ್ನಡಕದ ಫ್ರೇಮ್ಗೆ ಅಳವಡಿಸಿದ್ದ ರಹಸ್ಯ ಕ್ಯಾಮೆರಾದಿಂದ ದೇಗುಲದ ಫೋಟೋ ತೆಗೆಯಲು ಮುಂದಾಗಿದ್ದಾನೆ. ಕೈಯಲ್ಲಿದ್ದ ಬಟನ್ ಪ್ರೆಸ್ ಮಾಡುತ್ತಿದ್ದಂತೆ ಕನ್ನಡಕದ ಫ್ರೆಮ್ ಹೊಳೆಯಲಾರಂಭಿಸಿದೆ. ಕನ್ನಡಕದಲ್ಲಿ ಲೈಟ್ ಹೊಳೆಯುತ್ತಿದ್ದರಿಂದ ಅನುಮಾನಗೊಂಡ ಎಸ್ಎಸ್ಎಫ್ ವಾಚರ್ ಅನುರಾಜ್ ಬಜ್ಪೈ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ವ್ಯಕ್ತಿಯನ್ನು ವಶಕ್ಕೆ ಪಡೆದ ಬಳಿಕ ಭದ್ರತಾ ಏಜೆನ್ಸಿ ಮತ್ತು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಭದ್ರತೆಯ ದೃಷ್ಠಿಯಿಂದ ಅಯೋಧ್ಯೆಯ ಶ್ರೀ ರಾಮ ದೇಗುಲದ ಆವರಣದಲ್ಲಿ ಫೋಟೋ ಸೆರೆ ಹಿಡಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



