ಶ್ರೀನಿವಾಸಪುರ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರು-ಮದನಪಲ್ಲೆ ಹೆದ್ದಾರಿಯಲ್ಲಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿರುತ್ತದೆ.
ಮೃತ ಪಟ್ಟಿರುವ ವ್ಯಕ್ತಿಗಳನ್ನು ಆಂಧ್ರದ ತಿರುಪತಿ ನಗರದ ಕಟ್ಟಕಿಂದಪಾಳ್ಯಂನ ಪ್ರಕಾಶ್(49)ಹಾಗು ಕಡಪದ ಶಿಕ್ಷಕ ಮಾರುತಿ ಶಿವಕುಮಾರ್(55)ಎಂದು ಗುರಿತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳು ತಿರುಪತಿ ನಗರದ ಅಶೋಕನಗರದಲ್ಲಿ ವಾಸಿ ಆನಂದ್ ಜೊತೆಗೂಡಿ ಈಟಿಯಾಸ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದು ಕೆಲಸ ಮುಗಿಸಿ ಭಾನುವಾರ ವಾಪಸ್ಸು ಆಂಧ್ರಕ್ಕೆ ಹೋಗುತ್ತಿದ್ದಾಗ ಸುಣ್ಣಕಲ್ ಗೇಟ್ ಮತ್ತು ಮದರಂಕಂಪಲ್ಲಿ ಗೇಟ್ ನಡುವಿನ ತಿರುವಿನಲ್ಲಿ ಮದನಪಲ್ಲಿ ಕಡೆಯಿಂದ ನೆಲಮಂಗಲಕ್ಕೆ ಹೋರಟ್ಟಿದ್ದ ಮಹೇಶ್ ಎನ್ನುವರ ಮಹೆಂದ್ರ ಎಸ್ ಯು ವಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ನಡೆದಿರುತ್ತದೆ.ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



