ನ್ಯೂಜ್ ಡೆಸ್ಕ್:ಮಕ್ಕಳು ಹುಟ್ಟಿದರೆ ತಂದೆ-ತಾಯಿಗಳು ಸಂಭ್ರಮಿಸುತ್ತಾರೆ ಅದರಲ್ಲೂ ಗಂಡು ಮಕ್ಕಳು ಹುಟ್ಟಿದರೆ ಅನಂದ ಪರವಶರಾಗುತ್ತಾರೆ ಗಂಡುಮಗುವಿಗೆ ಜನ್ಮ ನೀಡಿದೆ ಎಂದು ಬೀಗುತ್ತಾರೆ ಪ್ರೀತಿ ಧಾರೆ ಎರೆದು ಪೊಷಿಸುತ್ತಾರೆ. ನಂತರದಲ್ಲಿ ಗಂಡು ಮಗು ಬೆಳೆದು ದೊಡ್ಡವರಾದಂತೆ,ಹೆತ್ತವರು ಹೋರೆಯಾಗಿದ್ದಾರೇನೋ ಎಂಬಂತೆ ಕೆಲ ಮಕ್ಕಳು ವರ್ತಿಸುತ್ತಾರೆ ನಾವ್ಯಾಕೆ ಪೋಷಕರನ್ನು ಪೊಷಿಸಬೇಕು ಎಂಬ ಭಾವನೆಯಲ್ಲಿ ದುಷ್ಟ ಮಕ್ಕಳು ನಡೆದುಕೊಳ್ಳುತ್ತಾರೆ ಅಂತ ಸಾಲಿನಲ್ಲಿ ದುಷ್ಟ ಮಗನೊಬ್ಬ ತನ್ನ ಹೆಂಡತಿಯ ಮಾತು ಕೇಳಿ ತನ್ನ ವೃದ್ಧ ತಂದೆಯನ್ನು ಕರೆದುಕೊಂಡು ಹೋಗಿ ಹರಿಯುವ ನದಿ ಕಾಲುವೆಗೆ ತಳ್ಳಿ ಹತ್ಯೆ ಮಾಡಿರುವ ಹೃದಯ ವಿದ್ರಾಯಕ ಘಟನೆ ಆಂಧ್ರದ ಪಲ್ನಾಡು ಜಿಲ್ಲೆಯ ಇಪುರ್ ಮಂಡಲದಲ್ಲಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಹೇಳಿರುವಂತೆ ನದಿ ದಂಡೆ ಮೇಲೆ ಕಾರನ್ನು ನಿಲ್ಲಿಸಿದ ವ್ಯಕ್ತಿ ವೃದ್ದ ಕೊಂಡಯ್ಯನನ್ನು ಕಾರಿನಿಂದ ಹೊರತೆಗೆದು, ತನ್ನ ಕೈಗಳಿಂದ ಎತ್ತಿ ಕಾಲುವೆಗೆ ಎಸೆದಿರುತ್ತಾನೆ ಅಲ್ಲಿದ್ದ ರೈತರು ತಕ್ಷಣ ಸ್ಥಳಕ್ಕೆ ಧಾವಿಸಿ ವ್ಯಕ್ತಿಯನ್ನು ಹಿಡಿದು ಕಾಲುವೆಯಲ್ಲಿ ಬಿದ್ದ ವೃದ್ದನ ಉಳಿಸಲು ಪ್ರಯತ್ನಿಸಿದ್ದಾರೆ ಆದರೆ ಸಾಧ್ಯವಾಗಲಿಲ್ಲ ವೃದ್ಧ ಕೊಂಡಯ್ಯ ನೀರಿನಲ್ಲಿ ಮುಳುಗಿದ್ದಾರೆ ದುಷ್ಟ ಮಗನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



