ಮುಳಬಾಗಿಲು: ರಸ್ತೆಯಲ್ಲಿ ಒಕ್ಕಣೆಗೆ ಹಾಕಿದ್ದ ಉರಳಿ ಫಸಲಿನ ಒಣಗಿದ ಸತ್ತೆ(ಹೊಟ್ಟು)ಕಾರಿನ ಚಕ್ರಕ್ಕೆ ಸಿಲುಕಿ ಕಾರು ಹೊತ್ತಿದಿರುವ ಘಟನೆ ಮುಳಬಾಗಿಲು ತಾಲೂಕು ನಂಗಲಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ನೊಂದಣಿಯ ಮಾರುತಿ ಡಿಝೈರ್ ಕಾರು ಮುಳಬಾಗಿಲು ತಾಲೂಕಿನ ನಂಗಲಿಯಿಂದ ಹೆಬ್ಬಣಿ ರಸ್ತೆಯಲ್ಲಿ ಹೋಗುವಾಗ ಸುನಪಕುಂಟೆ ಬಳಿ ರಸ್ತೆಯಲ್ಲಿ Farmers ಒಕ್ಕಣೆಗೆ ಹರಡಿದ್ದ ಹುರಳಿ ಬೆಳೆ ಮೇಲೆ ಕಾರು ಹೋಗುತ್ತಿದ್ದಾಗ ಕಾರಿನ ಚಕ್ರಕ್ಕೆ ಉರಳಿ ಹೊಟ್ಟು ಸುತ್ತಿಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ತಕ್ಷಣ ಕಾರಿನಲ್ಲಿದ್ದ ತಮ್ಮ ಲಗ್ಗೇಜು ಸಮೇತ ಕಾರಿನಿಂದ ಇಳಿದು ಪ್ರಣಾಪಯದಿಂದ ಪಾರಾಗಿದ್ದಾರೆ.ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬೆಂಕಿಯನ್ನು ನಂದಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.
ರಸ್ತೆ ಒಕ್ಕಣೆಗೆ ಜಿಲ್ಲಾಡಿಳಿತ ಕಡಿವಾಣ ಹಾಕಲಿ
ಕೋಲಾರ ಜಿಲ್ಲೆಯಲ್ಲಿ ರಸ್ತೆ ಒಕ್ಕಣೆ ನಿಷೇದ ಇದ್ದರೂ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲೆ ಉದ್ದಟ ತನದಿಂದ ಒಕ್ಕಣೆ ಮಾಡುತ್ತಿದ್ದಾರೆ ಬೆಸಿಗೆ ಆರಂಭವಾಗಿದೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಸಿಲು ತೀವ್ರವಾಗಿದೆ.ರಸ್ತೆ ಒಕ್ಕಣೆ ದ್ವಿಚಕ್ರ ವಾಹನ ಸವಾರರಿಗೂ ಮಾರಕ ಇದಕ್ಕಾಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಸ್ತೆ ಮೇಲೆ ಒಕ್ಕಣೆಯನ್ನು ಕಟ್ಟುನಿಟ್ಟಾಗಿ ನಿಷೇದಕ್ಕೆ ಮುಂದಾಗುವಂತೆ ವಾಹನ ಸವಾರರು ಒತ್ತಾಯಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



