ಬೆಂಗಳೂರು:ಕಾಂಗ್ರೆಸ್ ಸಚಿವರೊಬ್ಬರ ಮೇಲೆ ಅರಣ್ಯ ಭೂಮಿ ಒತ್ತುವರಿ ಮಾಡಿರುವ ಬಗ್ಗೆ ಆರೋಪಿಸಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ.
ಕಾರವಾರ ಜಿಲ್ಲೆಯ ಭಟ್ಕಳದ ಆರ್ಟಿಐ ಕಾರ್ಯಕರ್ತರಾದ ಶಂಕರ್ ನಾಯಕ್, ನಾಗೇಂದ್ರ ನಾಯಕ್ ಮತ್ತು ನಾಗೇಶ್ ನಾಯಕ್ ಅವರು ಉತ್ತರ ಕನ್ನಡ (uttara kannda) ಜಿಲ್ಲೆಯ ಉಸ್ತುವಾರಿ ಸಚಿವ ಹಾಗು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದಾಖಲಿಸಿದ್ದಾರೆ.
ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ದೂರು ನೀಡಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ, ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ದೂರುದಾರರ ಪ್ರಕಾರ, ಸಚಿವ ಭಟ್ಕಳ ತಾಲೂಕಿನ ಬೈಲೂರಿನ ಸರ್ಕಾರಿ ಅರಣ್ಯ ಜಾಗದ ಸರ್ವೆ ನಂ- 600ರಲ್ಲಿ ಅಕ್ರಮವಾಗಿ ತಮ್ಮ ಬೀನಾ ವೈದ್ಯ ಶಿಕ್ಷಣ ಸಂಸ್ಥೆಗಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪಿಸಲಾಗಿದೆ. ಮೇ 18, 2024 ರಂದು ಒತ್ತುವರಿ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದು ದೂರು ದಾಖಲು ಮಾಡಲಾಗಿದ್ದರೂ, ಅರಣ್ಯ ಅಧಿಕಾರಿಗಳು ಸಚಿವ ವೈದ್ಯ ಅವರ ಹೆಸರನ್ನು ಬಿಟ್ಟು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಚಿವ ವೈದ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಪ್ರಕರಣದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ದೂರುದಾರರು ಆರೋಪ ವ್ಯಕ್ತಪಡಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



