ಶ್ರೀನಿವಾಸಪುರ:ಜಮೀನು ವಿವಾದ ಮುಂದಿಟ್ಟುಕೊಂಡು ಅವರ ಮನೆ ಬಳಿಯೆ ವಕೀಲರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿನ ಹೆಚ್.ನಲ್ಲಪಲ್ಲಿಯಲ್ಲಿ ನಡೆದಿರುತ್ತದೆ ಹಲ್ಲೆಯಲ್ಲಿ ಗಾಯಗೊಂಡ ವಕೀಲ ಸೊಣ್ಣೇಗೌಡ ಎಂದು ಗುರತಿಸಲಾಗಿದೆ.
ಬಾಯಲ್ಲಿ ರಕ್ತ ಬರುವಂತೆ ಗುಂಪುಕಟ್ಟಿಕೊಂಡು ಬಂದವರು ಕಲ್ಲು ದೊಣ್ಣೆಯಲ್ಲಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು ತೀವ್ರವಾಗಿ ಗಾಯಗೊಂಡಂತ ವಕೀಲ ಸೊಣ್ಣೇಗೌಡ ಅವರು ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಕೀಲರ ಸಂಘದಿಂದ ಕಲಾಪಕ್ಕೆ ಬಹಿಷ್ಕಾರ
ವಕೀಲ ಸೊಣ್ಣೇಗೌಡರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 24 ಗಂಟೆ ಕಳೆದರು ಹಲ್ಲೆ ಮಾಡಿದ ಆರೋಪಿಗಳನ್ನು ಶ್ರೀನಿವಾಸಪುರದ ಪೋಲಿಸರು ಬಂಧಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶ್ರೀನಿವಾಸಪುರ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿದೆ.ವಕೀಲ ಸೊಣ್ಣೇಗೌಡರ ಮೇಲೆ ನಡೆದ ಹಲ್ಲೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶ್ರೀನಿವಾಸಪುರ ವಕೀಲರ ಸಂಘ ಪದಾಧಿಕಾರಿಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



