ಶ್ರೀನಿವಾಸಪುರ:ಹಣದ ವಿಚಾರವಾಗಿ ಕರ್ನಾಟಕದ ಇಬ್ಬರು ಆಂಧ್ರದ ರಾಮಸಮುದ್ರಂನಲ್ಲಿ ಜಗಳ ಆಡಿಕೊಂಡಿದ್ದು ನಂತರ ಊರಿಗೆ ವಾಪಸ್ಸು ಆಗಿದ್ದಾರೆ ಸಂಜೆ ಗ್ರಾಮದ ಬಸ್ ನಿಲ್ದಾಣದ ಬಳಿ ನ್ಯಾಯ ಪಂಚಾಯಿತಿ ಮಾಡುವ ಸಲುವಾಗಿ ಇಬ್ಬರು ಸೇರಿಕೊಂಡು ಜಗಳ ಆಡಿಕೊಂಡಿದ್ದಾರೆ ಈ ಸಂದರ್ಭದಲ್ಲಿ ಚಾಕುವಿನಿಂದ ಇರಿಯಲಾಗಿದ್ದು ಒರ್ವ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಇಂದು ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡದಿರುತ್ತದೆ.
ಮೃತನನ್ನು ಗುಂತವಾರಿಪಲ್ಲಿ ಮಂಜುನಾಥ್(32) ಎಂದು ಗುರತಿಸಲಾಗಿದೆ ಮೃತ ಮಂಜುನಾಥ್ ಹಾಗು ಕೂಳಗೂರ್ಕಿಯ ಶಿಮೂರ್ತಿ ಇಬ್ಬರು ಹಣಕಾಸು ವಿಚಾರವಾಗಿ ಆಂಧ್ರದ ರಾಮಸಮುದ್ರಂನಲ್ಲಿ ಇಂದು ಕಿತ್ತಾಡಿಕೊಂಡಿದ್ದಾರೆ ಇಬ್ಬರು ಊರಿಗೆ ವಾಪಸ್ಸು ಬಂದಿದ್ದಾರೆ ಮತೆ ತಡ ಸಂಜೆ ಇಬ್ಬರು ಸೋಮಯಾಜಲಹಳ್ಳಿ ಬಸ್ ನಿಲ್ದಾಣದ ಬಳಿ ನ್ಯಾಯ ಪಂಚಾಯಿತಿ ಹೆಸರಿನಲ್ಲಿ ಸೇರಿದ್ದಾರೆ ಅಲ್ಲಿ ಮತ್ತೆ ಜಗಳ ಆಡಿಕೊಂಡಿದ್ದು ಪರಸ್ಪರ ತಳ್ಳಾಡಿಕೊಂಡಿದ್ದಾರೆ ಈ ಸಂದರ್ಬದಲ್ಲಿ ಶಿಮೂರ್ತಿ ಕೈಯಲ್ಲಿದ್ದ ಚಾಕುವಿನಿಂದ ಇರಿದಿದ್ದಾಗಿ ಹೇಳಲಾಗಿದ್ದು ಪೋಲಿಸರ ತನಿಖೆಯಲ್ಲಿ ಸತ್ಯಾಂಶ ಹೋರಬರಬೇಕಾಗಿದೆ.
ಶಿವಮೂರ್ತಿ ಮನೆಗೆ ಬೆಂಕಿ ಹಚ್ಚಲು ಮುಂದಾದ ಗುಂಪು
ಚಾಕು ಇರಿತದಿಂದ ಮಂಜುನಾಥ್ ಸಾವನಪ್ಪಿರುವ ಸುದ್ದಿ ಹರಡುತ್ತಿದ್ದಂತೆ ಮೃತ ಮಂಜುನಾಥ್ ಕಡೆಯವರು ಗುಂಪು ಗೂಡಿಕೊಂಡು ಕೂಳಗುರ್ಕಿಯಲ್ಲಿನ ಶಿಮೂರ್ತಿ ಮನೆ ಮೇಲೆ ದಾಳಿಮಾಡಿ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದು ಸಕಾಲದಲ್ಲಿ ಪೋಲಿಸರು ಆಗಮಿಸಿ ಗುಂಪನ್ನು ಚದುರಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



