ಶ್ರೀನಿವಾಸಪುರ:ಹಣದ ವಿಚಾರವಾಗಿ ಕರ್ನಾಟಕದ ಇಬ್ಬರು ಆಂಧ್ರದ ರಾಮಸಮುದ್ರಂನಲ್ಲಿ ಜಗಳ ಆಡಿಕೊಂಡಿದ್ದು ನಂತರ ಊರಿಗೆ ವಾಪಸ್ಸು ಆಗಿದ್ದಾರೆ ಸಂಜೆ ಗ್ರಾಮದ ಬಸ್ ನಿಲ್ದಾಣದ ಬಳಿ ನ್ಯಾಯ ಪಂಚಾಯಿತಿ ಮಾಡುವ ಸಲುವಾಗಿ ಇಬ್ಬರು ಸೇರಿಕೊಂಡು ಜಗಳ ಆಡಿಕೊಂಡಿದ್ದಾರೆ ಈ ಸಂದರ್ಭದಲ್ಲಿ ಚಾಕುವಿನಿಂದ ಇರಿಯಲಾಗಿದ್ದು ಒರ್ವ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಇಂದು ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡದಿರುತ್ತದೆ.
ಮೃತನನ್ನು ಗುಂತವಾರಿಪಲ್ಲಿ ಮಂಜುನಾಥ್(32) ಎಂದು ಗುರತಿಸಲಾಗಿದೆ ಮೃತ ಮಂಜುನಾಥ್ ಹಾಗು ಕೂಳಗೂರ್ಕಿಯ ಶಿಮೂರ್ತಿ ಇಬ್ಬರು ಹಣಕಾಸು ವಿಚಾರವಾಗಿ ಆಂಧ್ರದ ರಾಮಸಮುದ್ರಂನಲ್ಲಿ ಇಂದು ಕಿತ್ತಾಡಿಕೊಂಡಿದ್ದಾರೆ ಇಬ್ಬರು ಊರಿಗೆ ವಾಪಸ್ಸು ಬಂದಿದ್ದಾರೆ ಮತೆ ತಡ ಸಂಜೆ ಇಬ್ಬರು ಸೋಮಯಾಜಲಹಳ್ಳಿ ಬಸ್ ನಿಲ್ದಾಣದ ಬಳಿ ನ್ಯಾಯ ಪಂಚಾಯಿತಿ ಹೆಸರಿನಲ್ಲಿ ಸೇರಿದ್ದಾರೆ ಅಲ್ಲಿ ಮತ್ತೆ ಜಗಳ ಆಡಿಕೊಂಡಿದ್ದು ಪರಸ್ಪರ ತಳ್ಳಾಡಿಕೊಂಡಿದ್ದಾರೆ ಈ ಸಂದರ್ಬದಲ್ಲಿ ಶಿಮೂರ್ತಿ ಕೈಯಲ್ಲಿದ್ದ ಚಾಕುವಿನಿಂದ ಇರಿದಿದ್ದಾಗಿ ಹೇಳಲಾಗಿದ್ದು ಪೋಲಿಸರ ತನಿಖೆಯಲ್ಲಿ ಸತ್ಯಾಂಶ ಹೋರಬರಬೇಕಾಗಿದೆ.
ಶಿವಮೂರ್ತಿ ಮನೆಗೆ ಬೆಂಕಿ ಹಚ್ಚಲು ಮುಂದಾದ ಗುಂಪು
ಚಾಕು ಇರಿತದಿಂದ ಮಂಜುನಾಥ್ ಸಾವನಪ್ಪಿರುವ ಸುದ್ದಿ ಹರಡುತ್ತಿದ್ದಂತೆ ಮೃತ ಮಂಜುನಾಥ್ ಕಡೆಯವರು ಗುಂಪು ಗೂಡಿಕೊಂಡು ಕೂಳಗುರ್ಕಿಯಲ್ಲಿನ ಶಿಮೂರ್ತಿ ಮನೆ ಮೇಲೆ ದಾಳಿಮಾಡಿ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದು ಸಕಾಲದಲ್ಲಿ ಪೋಲಿಸರು ಆಗಮಿಸಿ ಗುಂಪನ್ನು ಚದುರಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



