ಶ್ರೀನಿವಾಸಪುರ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀನಿವಾಸಪುರ ಪಟ್ಟಣದಲ್ಲಿ ಯುಗಾದಿ ಹಬ್ಬದಂದು ಶ್ರೀನಿವಾಸಪುರದ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಸಪ್ತಮಾತೃಕೆಯರ ಪಲ್ಲಕಿ ಉತ್ಸವಳ ಜಾತ್ರಾ ಮಹೋತ್ಸವದಂದು ರಾತ್ರಿ ಕರಗ ನಡೆಸುವುದು ಇಲ್ಲಿ ಸಂಪ್ರದಾಯವಾಗಿದ್ದು ಈ ಬಾರಿ ಕರಗವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ.
ವಿಜೃಂಭಣೆಯಿಂದ ನಡೆದ ಹಸಿ ಕರಗ
ಯುಗಾದಿಯಂದು ನಡೆಯುವ ಹಸಿಕರಗದ ಉತ್ಸವ ಯುಗಾದಿ ಮುನ್ನಾ ದಿನ ರಾತ್ರಿ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇಗುಲದಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಪೂಜೆ ನೆರವೇರಿಸಿ ಆರಂಭವಾಯಿತು ಮಲ್ಲಿಗೆ ಹೂವಿನಿಂದ ಶೃಂಗಾರ ಮಾಡಿದ ಕಳಶದ ಆಕೃತಿಯ ಹಸಿಕರಗಕ್ಕೆ ಕರಗದ ಪೂಜಾರಿಗಳು ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು ಕರಗ ಹೊರಲಿರುವ ಕರಗದ ಪೂಜಾರಿ ಹೋಳೂರಿನ ವೆಂಕಟೇಶಪ್ಪ ಹಾಗು ಸಂಗಡಿಗರು ಹಸಿ ಕರಗ ಮಡಿಲಲ್ಲಿ ಇರಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಬಂದರು. ಶ್ರೀ ಚೌಡೇಶ್ವರಿ ದೇವಾಲಯದಿಂದ ಆರಂಭವಾದ ಹಸಿ ಕರಗ ಕಟ್ಟೆಕೆಳಗಿನ ಪಾಳ್ಯ ಅಲ್ಲಿನ ಶ್ರೀನಿವಾಸನ ದೇವಸ್ಥಾನ,ವಲ್ಲಭಾಯ್ ರಸ್ತೆ ಶಂಕರಮಠ ವೃತ್ತ ಹಳೇಪೇಟೆ ಮುಳಬಾಗಿಲು ವೃತ್ತ ಎಂ.ಜಿ.ರಸ್ತೆ ಸಾಗಿ ಕನ್ಯಾಕಪರಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕರಗಧಾರಿಗಳು ತಮಟೆ ಸದ್ದಿಗೆ ಹೆಜ್ಜೆ ಇಡುತ್ತ ಸಂಚರಿಸಿದರು.ಕರಗದ ಮುಂದೆ ಸಾಗಿದ ಕಿಲುಕುದರೆ ,ಆಂಧ್ರಪ್ರದೇಶದ ಬುಟ್ಟ ಬೊಮ್ಮಲು ಗಾರಡಿಗೊಂಬೆಗಳು, ದೇವರ ಮುಖವಾಡಗಳು ಹಾಗಿದ್ದ ಬೊಂಬೆಗಳ ನೃತ್ಯ ಸಂಭ್ರಮ ಜನಾಕರ್ಷಣೆಯಾಗಿತ್ತು.
ಶೃಂಗರಿಸಿದ್ದ ರಸ್ತೆಗಳು
ಹಸಿಕರಗ ಸಾಗಿ ಬಂದ ದಾರಿ ಉದ್ದಕ್ಕೂ ರಂಗೋಲಿ ಹಾಕಿ ವಿದ್ಯತ್ ದೀಪಾಲಂಕಾರ ಮಾಡಿ ತಳಿರು ತೋರಣಗಳಿಂದ ಶೃಂಗರಿಸಿ ಸಾರ್ವಜನಿಕರು ಹಸಿ ಕರಗವನ್ನು ಸ್ವಾಗತಿಸುವ ಮೂಲಕ ಹಸಿ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



