ಶ್ರೀನಿವಾಸಪುರ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀನಿವಾಸಪುರ ಪಟ್ಟಣದಲ್ಲಿ ಯುಗಾದಿ ಹಬ್ಬದಂದು ಶ್ರೀನಿವಾಸಪುರದ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಸಪ್ತಮಾತೃಕೆಯರ ಪಲ್ಲಕಿ ಉತ್ಸವಳ ಜಾತ್ರಾ ಮಹೋತ್ಸವದಂದು ರಾತ್ರಿ ಕರಗ ನಡೆಸುವುದು ಇಲ್ಲಿ ಸಂಪ್ರದಾಯವಾಗಿದ್ದು ಈ ಬಾರಿ ಕರಗವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ.
ವಿಜೃಂಭಣೆಯಿಂದ ನಡೆದ ಹಸಿ ಕರಗ
ಯುಗಾದಿಯಂದು ನಡೆಯುವ ಹಸಿಕರಗದ ಉತ್ಸವ ಯುಗಾದಿ ಮುನ್ನಾ ದಿನ ರಾತ್ರಿ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇಗುಲದಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಪೂಜೆ ನೆರವೇರಿಸಿ ಆರಂಭವಾಯಿತು ಮಲ್ಲಿಗೆ ಹೂವಿನಿಂದ ಶೃಂಗಾರ ಮಾಡಿದ ಕಳಶದ ಆಕೃತಿಯ ಹಸಿಕರಗಕ್ಕೆ ಕರಗದ ಪೂಜಾರಿಗಳು ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು ಕರಗ ಹೊರಲಿರುವ ಕರಗದ ಪೂಜಾರಿ ಹೋಳೂರಿನ ವೆಂಕಟೇಶಪ್ಪ ಹಾಗು ಸಂಗಡಿಗರು ಹಸಿ ಕರಗ ಮಡಿಲಲ್ಲಿ ಇರಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಬಂದರು. ಶ್ರೀ ಚೌಡೇಶ್ವರಿ ದೇವಾಲಯದಿಂದ ಆರಂಭವಾದ ಹಸಿ ಕರಗ ಕಟ್ಟೆಕೆಳಗಿನ ಪಾಳ್ಯ ಅಲ್ಲಿನ ಶ್ರೀನಿವಾಸನ ದೇವಸ್ಥಾನ,ವಲ್ಲಭಾಯ್ ರಸ್ತೆ ಶಂಕರಮಠ ವೃತ್ತ ಹಳೇಪೇಟೆ ಮುಳಬಾಗಿಲು ವೃತ್ತ ಎಂ.ಜಿ.ರಸ್ತೆ ಸಾಗಿ ಕನ್ಯಾಕಪರಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕರಗಧಾರಿಗಳು ತಮಟೆ ಸದ್ದಿಗೆ ಹೆಜ್ಜೆ ಇಡುತ್ತ ಸಂಚರಿಸಿದರು.ಕರಗದ ಮುಂದೆ ಸಾಗಿದ ಕಿಲುಕುದರೆ ,ಆಂಧ್ರಪ್ರದೇಶದ ಬುಟ್ಟ ಬೊಮ್ಮಲು ಗಾರಡಿಗೊಂಬೆಗಳು, ದೇವರ ಮುಖವಾಡಗಳು ಹಾಗಿದ್ದ ಬೊಂಬೆಗಳ ನೃತ್ಯ ಸಂಭ್ರಮ ಜನಾಕರ್ಷಣೆಯಾಗಿತ್ತು.
ಶೃಂಗರಿಸಿದ್ದ ರಸ್ತೆಗಳು
ಹಸಿಕರಗ ಸಾಗಿ ಬಂದ ದಾರಿ ಉದ್ದಕ್ಕೂ ರಂಗೋಲಿ ಹಾಕಿ ವಿದ್ಯತ್ ದೀಪಾಲಂಕಾರ ಮಾಡಿ ತಳಿರು ತೋರಣಗಳಿಂದ ಶೃಂಗರಿಸಿ ಸಾರ್ವಜನಿಕರು ಹಸಿ ಕರಗವನ್ನು ಸ್ವಾಗತಿಸುವ ಮೂಲಕ ಹಸಿ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



