ಶ್ರೀನಿವಾಸಪುರ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀನಿವಾಸಪುರ ಪಟ್ಟಣದಲ್ಲಿ ಯುಗಾದಿ ಹಬ್ಬದಂದು ಶ್ರೀನಿವಾಸಪುರದ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಸಪ್ತಮಾತೃಕೆಯರ ಪಲ್ಲಕಿ ಉತ್ಸವಳ ಜಾತ್ರಾ ಮಹೋತ್ಸವದಂದು ರಾತ್ರಿ ಕರಗ ನಡೆಸುವುದು ಇಲ್ಲಿ ಸಂಪ್ರದಾಯವಾಗಿದ್ದು ಈ ಬಾರಿ ಕರಗವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ.
ವಿಜೃಂಭಣೆಯಿಂದ ನಡೆದ ಹಸಿ ಕರಗ
ಯುಗಾದಿಯಂದು ನಡೆಯುವ ಹಸಿಕರಗದ ಉತ್ಸವ ಯುಗಾದಿ ಮುನ್ನಾ ದಿನ ರಾತ್ರಿ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇಗುಲದಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಪೂಜೆ ನೆರವೇರಿಸಿ ಆರಂಭವಾಯಿತು ಮಲ್ಲಿಗೆ ಹೂವಿನಿಂದ ಶೃಂಗಾರ ಮಾಡಿದ ಕಳಶದ ಆಕೃತಿಯ ಹಸಿಕರಗಕ್ಕೆ ಕರಗದ ಪೂಜಾರಿಗಳು ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು ಕರಗ ಹೊರಲಿರುವ ಕರಗದ ಪೂಜಾರಿ ಹೋಳೂರಿನ ವೆಂಕಟೇಶಪ್ಪ ಹಾಗು ಸಂಗಡಿಗರು ಹಸಿ ಕರಗ ಮಡಿಲಲ್ಲಿ ಇರಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಬಂದರು. ಶ್ರೀ ಚೌಡೇಶ್ವರಿ ದೇವಾಲಯದಿಂದ ಆರಂಭವಾದ ಹಸಿ ಕರಗ ಕಟ್ಟೆಕೆಳಗಿನ ಪಾಳ್ಯ ಅಲ್ಲಿನ ಶ್ರೀನಿವಾಸನ ದೇವಸ್ಥಾನ,ವಲ್ಲಭಾಯ್ ರಸ್ತೆ ಶಂಕರಮಠ ವೃತ್ತ ಹಳೇಪೇಟೆ ಮುಳಬಾಗಿಲು ವೃತ್ತ ಎಂ.ಜಿ.ರಸ್ತೆ ಸಾಗಿ ಕನ್ಯಾಕಪರಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕರಗಧಾರಿಗಳು ತಮಟೆ ಸದ್ದಿಗೆ ಹೆಜ್ಜೆ ಇಡುತ್ತ ಸಂಚರಿಸಿದರು.ಕರಗದ ಮುಂದೆ ಸಾಗಿದ ಕಿಲುಕುದರೆ ,ಆಂಧ್ರಪ್ರದೇಶದ ಬುಟ್ಟ ಬೊಮ್ಮಲು ಗಾರಡಿಗೊಂಬೆಗಳು, ದೇವರ ಮುಖವಾಡಗಳು ಹಾಗಿದ್ದ ಬೊಂಬೆಗಳ ನೃತ್ಯ ಸಂಭ್ರಮ ಜನಾಕರ್ಷಣೆಯಾಗಿತ್ತು.
ಶೃಂಗರಿಸಿದ್ದ ರಸ್ತೆಗಳು
ಹಸಿಕರಗ ಸಾಗಿ ಬಂದ ದಾರಿ ಉದ್ದಕ್ಕೂ ರಂಗೋಲಿ ಹಾಕಿ ವಿದ್ಯತ್ ದೀಪಾಲಂಕಾರ ಮಾಡಿ ತಳಿರು ತೋರಣಗಳಿಂದ ಶೃಂಗರಿಸಿ ಸಾರ್ವಜನಿಕರು ಹಸಿ ಕರಗವನ್ನು ಸ್ವಾಗತಿಸುವ ಮೂಲಕ ಹಸಿ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



