ನ್ಯೂಜ್ ಡೆಸ್ಕ್:ಪ್ರಪಂಚ ಪ್ರಖ್ಯಾತ IT ಹಬ್ ಸಿಲಿಕಾನ್ ವ್ಯಾಲಿ ಎಂದು ಖ್ಯಾತಿ ಪಡೆದ ಬೆಂಗಳೂರು ನಗರದಲ್ಲಿ ಸಾವಿರಾರು ದೇವಾಲಯಗಳು ಇದೆ ಸಾವಿರಾರು ವರ್ಷಗಳ ಐತಿಹಾಸಿಕ ದೇವಾಲಯಗಳ ಜೊತೆಗೆ ಇತ್ತೀಚೆಗೆ ನಿರ್ಮಾಣವಾದ ಹಲವಾರು ದೇವಸ್ಥಾನಗಳನ್ನು ಗರ್ಭದಲ್ಲಿ ಅಡಗಿಸಿಕೊಂಡು ಇರುವ ಬೆಂಗಳೂರು ನಗರದಲ್ಲಿ ಮತ್ತೊಂದು ಶ್ರೀ ವೆಂಕಟೇಶ್ವರನ ದೇವಾಲಯ ನಿರ್ಮಾಣಕ್ಕೆ ತಿರುಮಲ ತಿರುಪತಿ ದೇವಾಲಯಂ ಟ್ರಸ್ಟ್(ಟಿಟಿಡಿ)ನಿರ್ಧಾರ ಮಾಡಿದೆ.
ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅಧ್ಯಕ್ಷತೆಯಲ್ಲಿ ತಿರುಮಲದಲ್ಲಿ ನಡೆದ ಟಿಟಿಡಿ ಟ್ರಸ್ಟಿಗಳಾದ ಮಂಡಳಿಯ ಸದಸ್ಯರು, ಇಒ ಶ್ಯಾಮಲಾ ರಾವ್, ಎಇಒ ವೆಂಕಯ್ಯ ಚೌಧರಿ ಮತ್ತು ಇತರರು ಈ ಸಭೆಯಲ್ಲಿ ಭಾಗವಹಿಸಿ ನಡೆಸಿದ ಸಭೆಯಲ್ಲಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದ್ದು ಇದರಲ್ಲಿ ಟಿಟಿಡಿ ಟ್ರಸ್ಟಿಗಳ ಮಂಡಳಿ ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಕೋರಿದಂತೆ ಬೆಂಗಳೂರು ನಗರದಲ್ಲಿ ದೇವಾಲಯ ನಿರ್ಮಾಣಕ್ಕೆ ಅಹ್ವಾನ ಬಂದಿದ್ದು ಬೆಂಗಳೂರಿನ ಮಲ್ಲೇಶ್ವರಂ ವಯ್ಯಾಲಿಕಾವಲ್ ನಲ್ಲಿರುವ ಶ್ರೀವಾರಿ ದೇವಾಲಯ ಚಿಕ್ಕದಾಗಿದ್ದು, ಬೃಹತ್ ದೇವಾಲಯ ನಿರ್ಮಿಸಬೇಕೆಂದು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿನಂತಿಸಿದ್ದು ಟಿಟಿಡಿ ಆಡಳಿತ ಮಂಡಳಿ ದೇವಾಲಯ ನಿರ್ಮಾಣಕ್ಕೆ ಒಪ್ಪಿಕೊಂಡಿದ್ದು ಭೂಮಿ ಮಂಜೂರು ಮಾಡಿದ ತಕ್ಷಣ ದೇವಾಲಯದ ನಿರ್ಮಾಣ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.
ರೇಣುಗುಂಟ ಏರ್ ಪೋರ್ಟ್ ಇನ್ಮುಂದೆ ಶ್ರೀವಾರಿ ಹೆಸರು
ಶ್ರೀ ವೆಂಕಟೇಶ್ವರನ ಪಾದದಡಿಯಲ್ಲಿರುವ ರೇಣಿಗುಂಟ ಅಂತರಾಷ್ಟ್ರೀಯವಿಮಾನ ನಿಲ್ದಾಣಕ್ಕೆ ಶ್ರೀವಾರಿ ಹೆಸರಿಡಲು ಪ್ರಸ್ತಾಪನೆ ಬಂದಿದ್ದು ಇದಕ್ಕೆ ಶ್ರೀವಾರಿ ಹೆಸರಿಡಲು ವಿಮಾನಯಾನ ಕಂಪನಿಗೆ ಪತ್ರ ಬರೆಯಲು ಟಿಟಿಡಿ ನಿರ್ಧರಿಸಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



