ಶ್ರೀನಿವಾಸಪುರ:ಕೋಲಾರ ಜಿಲ್ಲೆ ಹಾಲು ಒಕ್ಕೂಟದ ನಿರ್ದೇಶಕರಾಗಿ ಶ್ರೀನಿವಾಸಪುರ ಕ್ಷೇತ್ರದಿಂದ ಅಯ್ಕೆಯಾದ ಇಬ್ಬರು ನಿರ್ದೇಶಕರಾದ ಕೆ.ಕೆ.ಮಂಜು ಹಾಗು ಹನುಮೇಶ ಅವರಿಗೆ ಇಂದು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ ಗೌರವಿಸಿದರು. ಪಟ್ಟಣದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಕಾರ್ಯಕರ್ತರು ಆವರಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಇಬ್ಬರನ್ನು ಗೌರವಿಸಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ಕೋಮುಲ್ ಜಿಲ್ಲೆಯ ಜೀವನಾಡಿ
ಈ ಸಂದರ್ಭದಲ್ಲಿ ನೂತನ ನಿರ್ದೇಶಕ ಕಲ್ಲೂರುಮಂಜು ಮಾತನಾಡಿ ಒಕ್ಕೂಟದ ನಿರ್ದೇಶಕರಾಗಿ ಉತ್ತಮವಾಗಿ ಕೆಲಸ ಮಾಡುವುದಾಗಿ ಹೇಳಿದ ಅವರು ಕೋಮುಲ್ ನಮ್ಮ ಜಿಲ್ಲೆಯ ರೈತರ ಜೀವನಾಡಿಯಾಗಿದ್ದು ಹಾಲು ಒಕ್ಕೂಟಕ್ಕೆ ಹಾಲು ಹಾಕುತ್ತಿರುವ ರೈತರಿಗೆ ಹೆಚ್ಚಿನ ಅನುಕೂಲಗಳು ಸಿಗುವಂತೆಯೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.ನಮ್ಮ ನಾಯಕ ರಮೇಶ್ ಕುಮಾರ್ ಅವರು ನಮ್ಮ ಮೇಲೆ ಇಟ್ಟ ಭರವಸೆ ಉಳಿಸಿಕೊಳ್ಳಲಾಗುವುದು ಎಂದರು.ಸಮಾರಂಭದಲ್ಲಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲಆಶೋಕ್,ಪುರಸಭೆ ಮಾಜಿ ಅಧ್ಯಕ್ಷ ಬಿ.ಎಲ್.ಪ್ರಕಾಶ್ ನಿವೃತ್ತ ಶಿಕ್ಷಕ ಗೋವಿಂದರೆಡ್ಡಿ,ವೇಣು,ಹರಿಷ್ ಯಾದವ್ ಅವಲಕುಪ್ಪಗೀರಿಷ್,ನಂದಿನಿಹೋಟೆಲ್ ರಂಜೀತ್, ಮುಂತಾದವರು ಇದ್ದರು.
ಕೋಲಾರ ಜಿಲ್ಲಾ ಹಾಲು ಒಕ್ಕೂಟಕ್ಕೆ ಆಯ್ಕೆಯಾದ ನೂತನ ನಿದೇಶಕರು ಪ್ರತಿ ತಾಲೂಕಿನಿಂದ ಇಬ್ಬರು ನಿದೇಶಕರು ಆಯ್ಕೆಯಾಗಿದ್ದಾರೆ. ವಡಗೂರು ಹರೀಶ್ -jds(ಕೋಲಾರ),ಜಯಸಿಂಹ ಕೃಷ್ಣಪ್ಪ – ಕಾಂಗ್ರೆಸ್(ಕೆಜಿಎಫ್),ಕೆ.ಕೆ.ಮಂಜು – ಕಾಂಗ್ರೆಸ್(ಶ್ರೀನಿವಾಸಪುರ), ಹನುಮೇಶ್ – ಕಾಂಗ್ರೆಸ್(ಶ್ರೀನಿವಾಸಪುರ),ಎಸ್.ಎನ್.ನಾರಾಯಣಸ್ವಾಮಿ (Mla) – ಕಾಂಗ್ರೆಸ್(ಬಂಗಾರಪೇಟೆ),ಕೆವೈ ನಂಜೇಗೌಡ (Mla) – ಕಾಂಗ್ರೆಸ್ (ಅವಿರೋಧ ಆಯ್ಕೆ) ಮಾಲೂರು, ಚಂಚಿಮಲೆ ರಮೇಶ್ – ಕಾಂಗ್ರೆಸ್, ಶ್ರೀನಿವಾಸ್ – ಕಾಂಗ್ರೆಸ್, ಮಹಾಲಕ್ಷ್ಮಿ – ಕಾಂಗ್ರೆಸ್(ಕೋಲಾರ), ಕಾಂತಮ್ಮ – ಕಾಂಗ್ರೆಸ್(ಕೋಲಾರ), ಕಾಡೇನಹಳ್ಳಿ ನಾಗರಾಜ್ -jds(ಮುಳಬಾಗಿಲು), ಸಾಮೇಗೌಡ -jds(ಮುಳಬಾಗಿಲು), ನಾಗರಾಜ್ -jds.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



