ನ್ಯೂಜ್ ಡೆಸ್ಕ್: ತಿರುಪತಿಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ.
ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎ.ರಾಜಶೇಖರ್ ಬಾಬು ತಮ್ಮ ಅವರು ತಮ್ಮ ಹುಟ್ಟೂರು ತಿರುಪತಿ ಜಿಲ್ಲೆಯ ಪುತ್ತೂರಿನಲ್ಲಿ ಪ್ರತಿ ಭಾನುವಾರ ಚರ್ಚ್ ನ ಪ್ರಾರ್ಥನೆಗಳಲ್ಲಿ ಭಾಗವಹಿಸುತ್ತಿದ್ದರು ಎಂಬ ಆರೋಪವಿದೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿರುವುದರಿಂದ, ಇದು ಉದ್ಯೋಗಿಗಳಿಗೆ ನಿಗದಿಪಡಿಸಿರುವ ನೀತಿ ಸಂಹಿತೆಯ(Violation Of Hindu Code) ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಆಧಾರದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (TTD) ಜಾಗ್ರತ ದಳದ ಅಧಿಕಾರಿಗಳು AEOಎ. ರಾಜಶೇಖರ್ ಬಾಬು ಅವರ ಚಲನವಲನದ ಮೇಲೆ ನಿಗಾ ವಹಿಸಿ ವಿಚಾರಣೆ ನಡೆಸಿ ಟಿಟಿಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕ್ರಮವು ಟಿಟಿಡಿ ಜಾಗೃತ ಇಲಾಖೆಯ ವರದಿಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನೂತನ ಆಡಳಿತ ಮಂಡಳಿ ರಚನೆಯಾದ ಮೇಲೆ ಅನ್ಯಧರ್ಮ ಪಾಲನೆ ಮಾಡುತ್ತಿದ್ದ ಹಲವು ಸಿಬ್ಬಂದಿಗೆ ಬೇರೆ ಇಲಾಖೆಗೆ ತೆರಳುವಂತೆ ಇಲ್ಲವೇ ಹುದ್ದೆ ತೆರೆಯುವಂತೆ ಟಿಟಿಡಿ ಸೂಚಿಸಿತ್ತು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



