ನ್ಯೂಜ್ ಡೆಸ್ಕ್: ತಿರುಪತಿಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ.
ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎ.ರಾಜಶೇಖರ್ ಬಾಬು ತಮ್ಮ ಅವರು ತಮ್ಮ ಹುಟ್ಟೂರು ತಿರುಪತಿ ಜಿಲ್ಲೆಯ ಪುತ್ತೂರಿನಲ್ಲಿ ಪ್ರತಿ ಭಾನುವಾರ ಚರ್ಚ್ ನ ಪ್ರಾರ್ಥನೆಗಳಲ್ಲಿ ಭಾಗವಹಿಸುತ್ತಿದ್ದರು ಎಂಬ ಆರೋಪವಿದೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿರುವುದರಿಂದ, ಇದು ಉದ್ಯೋಗಿಗಳಿಗೆ ನಿಗದಿಪಡಿಸಿರುವ ನೀತಿ ಸಂಹಿತೆಯ(Violation Of Hindu Code) ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಆಧಾರದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (TTD) ಜಾಗ್ರತ ದಳದ ಅಧಿಕಾರಿಗಳು AEOಎ. ರಾಜಶೇಖರ್ ಬಾಬು ಅವರ ಚಲನವಲನದ ಮೇಲೆ ನಿಗಾ ವಹಿಸಿ ವಿಚಾರಣೆ ನಡೆಸಿ ಟಿಟಿಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕ್ರಮವು ಟಿಟಿಡಿ ಜಾಗೃತ ಇಲಾಖೆಯ ವರದಿಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನೂತನ ಆಡಳಿತ ಮಂಡಳಿ ರಚನೆಯಾದ ಮೇಲೆ ಅನ್ಯಧರ್ಮ ಪಾಲನೆ ಮಾಡುತ್ತಿದ್ದ ಹಲವು ಸಿಬ್ಬಂದಿಗೆ ಬೇರೆ ಇಲಾಖೆಗೆ ತೆರಳುವಂತೆ ಇಲ್ಲವೇ ಹುದ್ದೆ ತೆರೆಯುವಂತೆ ಟಿಟಿಡಿ ಸೂಚಿಸಿತ್ತು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



