ನ್ಯೂಜ್ ಡೆಸ್ಕ್: ತಿರುಪತಿಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ.
ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎ.ರಾಜಶೇಖರ್ ಬಾಬು ತಮ್ಮ ಅವರು ತಮ್ಮ ಹುಟ್ಟೂರು ತಿರುಪತಿ ಜಿಲ್ಲೆಯ ಪುತ್ತೂರಿನಲ್ಲಿ ಪ್ರತಿ ಭಾನುವಾರ ಚರ್ಚ್ ನ ಪ್ರಾರ್ಥನೆಗಳಲ್ಲಿ ಭಾಗವಹಿಸುತ್ತಿದ್ದರು ಎಂಬ ಆರೋಪವಿದೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿರುವುದರಿಂದ, ಇದು ಉದ್ಯೋಗಿಗಳಿಗೆ ನಿಗದಿಪಡಿಸಿರುವ ನೀತಿ ಸಂಹಿತೆಯ(Violation Of Hindu Code) ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಆಧಾರದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (TTD) ಜಾಗ್ರತ ದಳದ ಅಧಿಕಾರಿಗಳು AEOಎ. ರಾಜಶೇಖರ್ ಬಾಬು ಅವರ ಚಲನವಲನದ ಮೇಲೆ ನಿಗಾ ವಹಿಸಿ ವಿಚಾರಣೆ ನಡೆಸಿ ಟಿಟಿಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕ್ರಮವು ಟಿಟಿಡಿ ಜಾಗೃತ ಇಲಾಖೆಯ ವರದಿಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನೂತನ ಆಡಳಿತ ಮಂಡಳಿ ರಚನೆಯಾದ ಮೇಲೆ ಅನ್ಯಧರ್ಮ ಪಾಲನೆ ಮಾಡುತ್ತಿದ್ದ ಹಲವು ಸಿಬ್ಬಂದಿಗೆ ಬೇರೆ ಇಲಾಖೆಗೆ ತೆರಳುವಂತೆ ಇಲ್ಲವೇ ಹುದ್ದೆ ತೆರೆಯುವಂತೆ ಟಿಟಿಡಿ ಸೂಚಿಸಿತ್ತು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



