ನ್ಯೂಜ್ ಡೆಸ್ಕ್:ವಿಭಜಿತ ಕೋಲಾರ ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಇ.ಡಿ ದಾಳಿ ನಡೆದಿದ್ದು ವಿದೇಶದಲ್ಲಿ ಹಣ ಹೂಡಿಕೆ ವಿಚಾರವಾಗಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ದಾಳಿಗೆ ನಿಖರವಾದ ಮಾಹಿತಿ ಹೊರಬರಬೇಕಿದೆ.
ವಿದೇಶಗಳಲ್ಲಿನ ಬ್ಯಾಂಕ್ ಖಾತೆಗಳು, ವಿದೇಶಿ ವಹಿವಾಟುಗಳಲ್ಲಿನ ಹೂಡಿಕೆಗಳು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿರಬಹುದು ಎನ್ನಲಾಗುತ್ತಿದೆ.
ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಎನ್ನಲಾಗುತ್ತಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



