ಶ್ರೀನಿವಾಸಪುರ:ಕೆ ಎಸ್ ಆರ್ ಟಿ ಸಿ ಉದ್ಯೋಗಿ ಎಂ.ಡಿ.ಬಾಬಾಜಾನ್(53) ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ಶ್ರೀನಿವಾಸಪುರ ಘಟಕದಲ್ಲಿ ಚಾಲಕನಾಗಿದ್ದ ಅವರು ಅಪಘಾತದಲ್ಲಿ ಕಾಲುಗಳಿಗೆ ತೀವ್ರಗಾಯವಾದ ಹಿನ್ನಲೆಯಲ್ಲಿ ಕಚೇರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅವರು 26ವರ್ಷಗಳಿಂದ ರಾಜ್ಯಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮೂಲತಃ ತಾಲೂಕಿನ ಮುತ್ತಕಪಲ್ಲಿ ಗ್ರಾಮದವರಾಗಿದ್ದು ಶ್ರೀನಿವಾಸಪುರ ಪಟ್ಟಣದಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು, ಸದಾ ಹಸನ್ಮುಖಿಯಾಗಿ ಸಮಾಜದಲ್ಲಿ ಎಲ್ಲರೊಂದಿಗೂ ಸೌಹಾರ್ದತೆಯಿಂದ ಬೆರೆಯುತ್ತಿದ್ದರು ಎಂದು ಸ್ನೇಹಿತರು ಹೇಳುತ್ತಾರೆ.ಮೃತ ಬಾಬಾಜಾನ್ ಪತ್ನಿ ಒರ್ವಪುತ್ರ ಒರ್ವಪುತ್ರಿ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾರಿಗೆ ಸಂಸ್ಥೆ ವತಿಯಿಂದ ಗೌರವ
ಮೃತ ಬಾಬಾಜಾನ್ ಅವರಿಗೆ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಗೌರವ ಸಲ್ಲಿಸಲಾಯಿತು ಸಾರಿಗೆ ಸಂಸ್ಥೆ ಶ್ರೀನಿವಾಸಪುರ ಘಟಕದ ವ್ಯವಸ್ಥಾಪಕ ವೆಂಕಟೇಶ್ ಹಾಗು ಸಂಸ್ಥೆ ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್ ಅವರು ಮುತ್ತಕಪಲ್ಲಿಗೆ ಭೇಟಿಕೊಟ್ಟು ಶ್ರದ್ಧಾಂಜಲಿ ಸಲ್ಲಿಸಿ ಕಾರ್ಮಿಕ ಕಲ್ಯಾಣ ನಿಧಿಯನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿರುತ್ತಾರೆ.ಇಲಾಖೆ ಉದ್ಯೋಗಿಗಳು ಮುನಿರೆಡ್ಡಿ,ರೋಣೂರುಮಂಜು,ಸತೀಶ್,ನಾರಯಣಸ್ವಾಮಿ ಭೇಟಿಕೊಟ್ಟಿದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



