ಶ್ರೀನಿವಾಸಪುರ:ಕೆ ಎಸ್ ಆರ್ ಟಿ ಸಿ ಉದ್ಯೋಗಿ ಎಂ.ಡಿ.ಬಾಬಾಜಾನ್(53) ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ಶ್ರೀನಿವಾಸಪುರ ಘಟಕದಲ್ಲಿ ಚಾಲಕನಾಗಿದ್ದ ಅವರು ಅಪಘಾತದಲ್ಲಿ ಕಾಲುಗಳಿಗೆ ತೀವ್ರಗಾಯವಾದ ಹಿನ್ನಲೆಯಲ್ಲಿ ಕಚೇರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅವರು 26ವರ್ಷಗಳಿಂದ ರಾಜ್ಯಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮೂಲತಃ ತಾಲೂಕಿನ ಮುತ್ತಕಪಲ್ಲಿ ಗ್ರಾಮದವರಾಗಿದ್ದು ಶ್ರೀನಿವಾಸಪುರ ಪಟ್ಟಣದಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು, ಸದಾ ಹಸನ್ಮುಖಿಯಾಗಿ ಸಮಾಜದಲ್ಲಿ ಎಲ್ಲರೊಂದಿಗೂ ಸೌಹಾರ್ದತೆಯಿಂದ ಬೆರೆಯುತ್ತಿದ್ದರು ಎಂದು ಸ್ನೇಹಿತರು ಹೇಳುತ್ತಾರೆ.ಮೃತ ಬಾಬಾಜಾನ್ ಪತ್ನಿ ಒರ್ವಪುತ್ರ ಒರ್ವಪುತ್ರಿ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾರಿಗೆ ಸಂಸ್ಥೆ ವತಿಯಿಂದ ಗೌರವ
ಮೃತ ಬಾಬಾಜಾನ್ ಅವರಿಗೆ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಗೌರವ ಸಲ್ಲಿಸಲಾಯಿತು ಸಾರಿಗೆ ಸಂಸ್ಥೆ ಶ್ರೀನಿವಾಸಪುರ ಘಟಕದ ವ್ಯವಸ್ಥಾಪಕ ವೆಂಕಟೇಶ್ ಹಾಗು ಸಂಸ್ಥೆ ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್ ಅವರು ಮುತ್ತಕಪಲ್ಲಿಗೆ ಭೇಟಿಕೊಟ್ಟು ಶ್ರದ್ಧಾಂಜಲಿ ಸಲ್ಲಿಸಿ ಕಾರ್ಮಿಕ ಕಲ್ಯಾಣ ನಿಧಿಯನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿರುತ್ತಾರೆ.ಇಲಾಖೆ ಉದ್ಯೋಗಿಗಳು ಮುನಿರೆಡ್ಡಿ,ರೋಣೂರುಮಂಜು,ಸತೀಶ್,ನಾರಯಣಸ್ವಾಮಿ ಭೇಟಿಕೊಟ್ಟಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



