ಶ್ರೀನಿವಾಸಪುರ:ತಾಲೂಕಿನ ಪ್ರಮುಖ ರಾಜಕಾರಣಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಅವರ ಜನ್ಮ ದಿನವನ್ನು ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಚರಿಸಿದರು.
ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು ಮತ್ತು ತೂಪಲ್ಲಿನಾರಯಣಸ್ವಾಮಿ ಅಭಿಮಾನಿಗಳು ಅವರಿಗೆ ಆಯುರ್ ಆರೋಗ್ಯ ಕರುಣಿಸಲಿ ಸಾರ್ವಜನಿಕ ಜೀವನದಲ್ಲಿ ಉತ್ತಮ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಪ್ರಾರ್ಥಿಸಿದರು. ನಂತರ ಅವರ ಸಮ್ಮುಖದಲ್ಲಿ ಬೃಹತ್ ಗಾತ್ರದ ಕೆಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.
ತಾಲೂಕಿನ ಲಕ್ಷ್ಮೀಪುರ ಕ್ರಾಸ್ ನಲ್ಲಿ ಸಂಜೆ ಮಳೆ ಎನ್ನದೆ ಸೇರಿದ್ದ ನೂರಾರು ಕಾರ್ಯಕರ್ತರು ತೂಪಲ್ಲಿನಾರಯಣಸ್ವಾಮಿ ಅವರಿಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ ನಂತರ ಕೆಕ್ ಕತ್ತರಿಸಿ ಹಳ್ಳಿಗಳಲ್ಲಿ ಬಡ ಮಹಿಳೆಯರಿಗೆ ಸೀರೆ ವಿತರಿಸಿ ತೂಪಲ್ಲಿನಾರಯಣಸ್ವಾಮಿ ಜನುಮದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪೂಲುಶಿವಾರೆಡ್ಡಿ.ಬಿ.ಎಲ್.ದುರ್ಗಾ, ಅವಲಕುಪ್ಪರಾಮಚಂದ್ರ, ಶ್ರೀನಿವಾಸರೆಡ್ಡಿ ದಿಂಬಾಲಶಂಕರರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



