ಶ್ರೀನಿವಾಸಪುರ:ತಾಲೂಕಿನ ಪ್ರಮುಖ ರಾಜಕಾರಣಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಅವರ ಜನ್ಮ ದಿನವನ್ನು ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಚರಿಸಿದರು.
ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು ಮತ್ತು ತೂಪಲ್ಲಿನಾರಯಣಸ್ವಾಮಿ ಅಭಿಮಾನಿಗಳು ಅವರಿಗೆ ಆಯುರ್ ಆರೋಗ್ಯ ಕರುಣಿಸಲಿ ಸಾರ್ವಜನಿಕ ಜೀವನದಲ್ಲಿ ಉತ್ತಮ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಪ್ರಾರ್ಥಿಸಿದರು. ನಂತರ ಅವರ ಸಮ್ಮುಖದಲ್ಲಿ ಬೃಹತ್ ಗಾತ್ರದ ಕೆಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.
ತಾಲೂಕಿನ ಲಕ್ಷ್ಮೀಪುರ ಕ್ರಾಸ್ ನಲ್ಲಿ ಸಂಜೆ ಮಳೆ ಎನ್ನದೆ ಸೇರಿದ್ದ ನೂರಾರು ಕಾರ್ಯಕರ್ತರು ತೂಪಲ್ಲಿನಾರಯಣಸ್ವಾಮಿ ಅವರಿಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ ನಂತರ ಕೆಕ್ ಕತ್ತರಿಸಿ ಹಳ್ಳಿಗಳಲ್ಲಿ ಬಡ ಮಹಿಳೆಯರಿಗೆ ಸೀರೆ ವಿತರಿಸಿ ತೂಪಲ್ಲಿನಾರಯಣಸ್ವಾಮಿ ಜನುಮದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪೂಲುಶಿವಾರೆಡ್ಡಿ.ಬಿ.ಎಲ್.ದುರ್ಗಾ, ಅವಲಕುಪ್ಪರಾಮಚಂದ್ರ, ಶ್ರೀನಿವಾಸರೆಡ್ಡಿ ದಿಂಬಾಲಶಂಕರರೆಡ್ಡಿ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



