ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದ ಡಿವಿಜಿ ರಸ್ತೆಯಲ್ಲಿರುವ ಶ್ರೀನಿವಾಸಪುರ PLD ಅಧ್ಯಕ್ಷರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.ಪಟ್ಟಣದ ವೆಂಕಟೇಶ್ವರ ಬಡಾವಣೆಯ ಡಿವಿಜಿ ರಸ್ತೆಯಲ್ಲಿರುವ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ರವರ ಮನೆ ಇದ್ದು ಇವರು ಕುಟುಂಬ ಸಮೇತರಾಗಿ ಮೂರು ದಿನಗಳ ಹಿಂದೆ ಮೈಸೂರಿಗೆ ನೆಂಟರ ಮನೆಗೆ ತೆರಿಳಿದ್ದಾಗ ಕಳ್ಳತನ ನಡದಿರುತ್ತದೆ.
ಶ್ವಾನ ದಳ ಬೆರಳಚ್ಚು ತಜ್ಞರ ಭೇಟಿ
ಅಶೋಕ್ ಕುಟುಂಬ ಕಳ್ಳತನದ ಮಾಹಿತಿ ತಿಳಿದು ಮೈಸೂರಿನಿಂದ ವಾಪಾಸ್ಸಾಗುತ್ತಿದ್ದು ಸ್ಥಳಕ್ಕೆ ಪೊಲೀಸ್ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ, ಮನೆ ಮಾಲಿಕ ಅಶೋಕ್ ಬಂದ ನಂತರ ಕಳ್ಳತನವಾಗಿರುವ ವಡವೆ ಹಣದ ಮಾಹಿತಿ ತಿಳಿಯಲಿದೆ.ಸಹಾಯಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್,ಶ್ರೀನಿವಾಸಪುರ ಪೊಲೀಸ್ ಠಾಣಾಧಿಕಾರಿ ಗೊರವನಕೊಳ್ಳ ಅವರು ಅಶೋಕ್ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
ದಿಂಬಾಲ್ ಅಶೋಕ್ ಮನೆ ಬಾಗಿಲು ತೆಗೆದಿರುವುದನ್ನು ಕಂಡ ಪಕ್ಕದ ಮನೆಯರು ಅನುಮಾನ ಗೊಂಡು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ,ಕಳ್ಳರು ಚಾಲಾಕಿತನದಿಂದ ಕಳ್ಳತನ ಮಾಡಿದ್ದು ದಿಂಬಾಲ್ ಅಶೋಕ್ ಅವರ ಮನೆಯ ಸುತ್ತಮುತ್ತಲಿನ ಮನೆಗಳ ಮುಂದಿನ ಸಿಸಿ ಕ್ಯಾಮಾರಗಳನ್ನು ಹೊಡೆದು ಹಾಕಿ ಕಳ್ಳತನ ಮಾಡಿದ್ದಾಗಿ ಹೇಳುತ್ತಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



