ಶ್ರೀನಿವಾಸಪುರ:ಪಟ್ಟಣದ ವಿವಿಧ ರಸ್ತೆಗಳ ಬದಿ ತಿಂಡಿ ಅಂಗಡಿ ಹೋಟೆಲ್ ಗಳನ್ನು ಒಂದೇ ಸೂರಿನಡಿ ತಂದು ವ್ಯಾಪಾರಸ್ಥರಿಗೆ ಅನಕೂಲಮಾಡುವ ಉದ್ದೇಶದಿಂದ ಪುರಸಭೆ ಫುಡ್ ಕೋರ್ಟ್ ನಿರ್ಮಾಣ ಮಾಡಿದೆ ಎಂದು ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕೀಯರ ಕಾಲೇಜು ಮುಂಭಾಗದಲ್ಲಿ ಪುಡ್ ಕೋರ್ಟ್ ಲೋಕಾರ್ಪಣೆ ಮಾಡಿ ಮಾತನಾಡಿದರು.
ಬೀದಿ ಬದಿ ವ್ಯಾಪಾರಸ್ಥರ ಪಟ್ಟಿಯನ್ನು Srinivasapura ಪುರಸಭೆ ಅಧಿಕಾರಿಗಳಿಂದ ಸಿದ್ದಪಡಿಸಲಾಗಿದ್ದು, ಲಾಟರಿ ಮೂಲಕ ಅಂಗಡಿಗಳನ್ನು ಹಂಚಿಕೆ ಮಾಡಲಾಗುವುದು.ಯಾವುದೆ ಷರತ್ತು ಇಲ್ಲದೆ ಅಂಗಡಿ ನೀಡಲಾಗುತ್ತಿದ್ದು ಮೂಲ ಅಂಗಡಿ ಪಡೆದವರು ಮಾತ್ರ ಅಂಗಡಿ ತೆರೆದು ವ್ಯವಹಾರ ಮಾಡಬೇಕು ಬೇರೆವರಿಗೆ ಬಾಡಿಗೆ ಕೊಡುವುದು ಮಾಡಬೇಡಿ ಈ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ಜರಿಗಿಸಲಾಗುವುದು ಹಾಗೆ ಈ ಜಾಗ ನಿಮ್ಮ ಸ್ವಂತ ಜಾಗ ಅಲ್ಲ ಎಂದು ಹೇಳಿದರು.
ಪಟ್ಟಣದ ಅಭಿವೃದ್ಧಿಗೆ ಆದ್ಯತೆ
ಪಟ್ಟಣದಲ್ಲಿ ಸುಮಾರು 7 ಸಾವಿರ ಮನೆಗಳು ಇದ್ದು ಅದರಲ್ಲಿ ಈಗಾಗಲೇ ನನ್ನ ಅವಧಿಯಲ್ಲಿ 2600 ಮೇಲ್ಟಟ್ಟು ಖಾತೆಗಳನ್ನು ಮಾಡಲಾಗಿದೆ. ನನ್ನ ಆಶಯಗಳಿಗೆ ಸಹಕರಿಸುತ್ತಿರುವ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ಅವರು. 2018 ರಲ್ಲಿ ಪಟ್ಟಣದ ಆಭಿವೃದ್ಧಿಗಾಗಿ ಸರ್ಕಾರದಿಂದ 15 ಕೋಟಿ ರೂ ವಿಶೇಷ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಮೂಲಕ ಪಟ್ಟಣದಲ್ಲಿ ರಸ್ತೆ, ಕೊಳವೆಬಾವಿ, ಕುಡಿಯುವ ನೀರು , ಚರಂಡಿಗಳ ಅಭಿವೃದ್ಧಿ ನಿರ್ಮಾಣ ಸೇರಿದಂತೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸಲು ಪುರಸಭೆ ಸದಸ್ಯರ ಸಹಕಾರದೊಂದಿಗೆ ಪಟ್ಟಣವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಮುಖ್ಯಾಧಿಕಾರಿ ವಿ.ನಾಗರಾಜ್, ಉಪಾಧ್ಯಕ್ಷೆ ಸುನಿತಾ, ಮಾಜಿ ಉಪಾಧ್ಯಕ್ಷೆ ಆಯೀಶಾ ನಯಾಜ್, ಸದಸ್ಯರಾದ ಆನಂದ್ಬಾಬು, ಎನ್ಎನ್ಆರ್ .ನಾಗರಾಜ್, ನಾಮನಿ ಸದಸ್ಯರಾದ ನರಸಿಂಹಮೂರ್ತಿ , ಹೇಮಂತ್, ಕಂದಾಯ ನಿರೀಕ್ಷಕ ಎನ್.ಶಂಕರ್, ಆರೋಗ್ಯ ನಿರೀಕ್ಷಕ ಸುರೇಶ್, ಸಿಬ್ಬಂದಿಗಳಾದ ಸಂತೋಷ್, ನಾಗೇಶ್, ಶ್ರೀನಾಥ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



