ಬೆಂಗಳೂರು:ಬೆಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ಮಾಲಿಕ ಎಸಗಿರುವ ಮೃಗಿಯ ಕೃತ್ಯ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಖಾಸಗಿ ಕಾಲೇಜಿನ ಕೇರಳದ ಯುವತಿ 10 ದಿನಗಳ ಹಿಂದೆಯಷ್ಟೇ ಆರೋಪಿ ಅಶ್ರಫ್ ಒಡೆತನದ ಪಿ.ಜಿಗೆ ದಾಖಲಾಗಿದ್ದಳು.ಪಿಜಿ ಮಾಲಿಕ ಅಶ್ರಫ್ ಶುಕ್ರವಾರ ರಾತ್ರಿ ನನ್ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯಿದು ದೌರ್ಜನ್ಯವೆಸಗಿದ್ದ. ನಂತರ ನನ್ನನ್ನು ಪೇಯಿಂಗ್ ಗೆಸ್ಟ್ಗೆ ವಾಪಸ್ ಕರೆತಂದು ಬಿಟ್ಟಿದ್ದ ಎಂದು ಸಂತ್ರಸ್ತೆ ಪೋಲಿಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ.
ಕೃತ್ಯಕ್ಕೂ ಮೊದಲು ಹಲ್ಲೆ ಮಾಡಿದ್ದ ಅತ್ಯಾಚಾರ ಎಸಗಲು ಪ್ರಯತ್ನಿಸಿದಾಗ, ವಿರೋಧಿಸಿದ್ದಕ್ಕೆ ಮತ್ತೆ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಯುವತಿ ದೂರಿದ್ದಾಳೆ.
ಯುವತಿ ನೀಡಿರುವ ದೂರಿನ ಪ್ರಕಾರ, ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿ, ಪಿಜಿ ಮಾಲೀಕ ಅಶ್ರಫ್ ನನ್ನು ಇಂದು (ಭಾನುವಾರ) ಬಂಧಿಸಿದ್ದಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾಗಿದ್ದ ಸಂತ್ರಸ್ತೆ ಸ್ನೇಹಿತರ ಸಹಾಯದಿಂದ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



